/newsfirstlive-kannada/media/post_attachments/wp-content/uploads/2025/05/RCB_TEAM-3.jpg)
ಚಿನ್ನಸ್ವಾಮಿ ಕ್ರಿಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಆರ್ಸಿಬಿ ಆಟಗಾರರನ್ನ, ಟ್ರೋಫಿಯನ್ನ, ಕಣ್ತುಂಬಿಕೊಳ್ಳೋಕೆ ಬಂದಿದ್ದ ಫ್ಯಾನ್ಸ್ ಸ್ಟೇಡಿಯಂ ಒಳಗೆ ನುಗ್ಗೋಕೆ ಯತ್ನಿಸಿದ್ದರು. ವೇಳೆ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ. ಹಲವರು ಅಸ್ವಸ್ಥಗೊಂಡಿದ್ದು, ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್ಸಿಬಿ ಹೇಳಿದ್ದೇನು..?
ಮಾಧ್ಯಮಗಳ ಮೂಲಕ ಬೆಳಕಿಗೆ ಬಂದ ಇಂದಿನ ಘಟನೆ ಬಗ್ಗೆ ತೀವ್ರ ನೊಂದಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ಜೀವ ಕಳೆದುಕೊಂಡವರಿಗಾಗಿ ಆರ್ಸಿಬಿ ಶೋಕಿಸುತ್ತಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದೆ. ಪರಿಸ್ಥಿತಿ ಬಗ್ಗೆ ತಿಳಿದ ತಕ್ಷಣವೇ ಕಾರ್ಯಕ್ರಮದಲ್ಲಿ ತಿದ್ದುಪಡಿ ಮಾಡಿಕೊಂಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಗಳನ್ನು ಅನುಸರಿಸಿದ್ದೇವೆ. ಆರ್ಸಿಬಿಯ ಎಲ್ಲಾ ಬೆಂಬಲಿಗರು ದಯವಿಟ್ಟು ಸುರಕ್ಷಿತವಾಗಿರಲು ವಿನಂತಿಸುತ್ತೇವೆ.. ಅಂತಾ ಆರ್ಸಿಬಿ ಸ್ಟೇಟ್ಮೆಂಟ್ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ.. ಟ್ವೀಟ್ ಮಾಡಿ ಏನಂದ್ರು..?
ಆಗಿದ್ದೇನು..?
ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಮುಂಭಾಗದಲ್ಲಿ ಆರ್ಸಿಬಿ ಟೀಂಗೆ ಹಾಗೂ ಟೀಂನ ಮ್ಯಾನೇಜ್ಮೆಂಟ್ಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿತ್ತು. ಇತ್ತ ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ, ಫ್ಯಾನ್ಸ್ ಮೀಟ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಗೆ ಅಪಾರ ಅಭಿಮಾನಿಗಳು ಹರಿದು ಬಂದಿದ್ದಾರೆ. ಆಗ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ನಡೆದು ಅನಾಹುತ ಆಗಿದೆ. ಇನ್ನು, ಕಾಲ್ತುಳಿತ ಸಂದರ್ಭದಲ್ಲಿ ಆಟಗಾರರು ವಿಧಾನಸೌಧದ ಕಾರ್ಯಕ್ರಮದಲ್ಲಿದ್ದರು.
ಇದನ್ನೂ ಓದಿ: ಮೃತರ ಸಂಖ್ಯೆ 11ಕ್ಕೆ ಏರಿಕೆ.. ಬಹುತೇಕರು 25 ವರ್ಷದೊಳಗಿನ ಯುವಕರು..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ