/newsfirstlive-kannada/media/post_attachments/wp-content/uploads/2025/06/TMK-ACCIDENT.jpg)
ತುಮಕೂರು: ಕುಣಿಗಲ್ ಬೈಪಾಸ್ನಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಜೀವ ಕಳೆದುಕೊಂಡಿದ್ದಾರೆ.
ಧರ್ಮಸ್ಥಳದಿಂದ ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ. ಗಂಡ, ಹೆಂಡತಿ, ಮಗ, ಮಗಳು ದುರ್ಮರಣ ಹೊಂದಿದ್ದಾರೆ. ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ದುರ್ಘಟನೆ ಸಂಭವಿಸಿದೆ. ಕುಣಿಗಲ್ ಬಳಿ ಹಾದು ಹೋಗಿರುವ ಬೆಂಗಳೂರು ಟು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಇದಾಗಿದೆ.
ಮೃತರೆಲ್ಲರೂ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ಪೊಸ್ಟ್ನ ಸಿಬೇಗೌಡ ಕುಟುಂಬದವರು ಎಂದು ಹೇಳಲಾಗ್ತಿದೆ. ಯುಟರ್ನ್ ತೆಗೆದು ಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಕುಣಿಗಲ್ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಜೈಲು ಹಕ್ಕಿಗೆ ಕೈದಿಗಳಿಂದ ಟಾರ್ಚರ್.. ನಟಿ ರನ್ಯಾ ರಾವ್ಗೆ ಸಂಬಂಧಿಸಿದ ಶಾಕಿಂಗ್ ವಿಷಯ ರಿವೀಲ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ