/newsfirstlive-kannada/media/post_attachments/wp-content/uploads/2025/05/Lightning-Strike.jpg)
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯವಾಗಿದೆ. ಗ್ರಾಮದ ಭೀರಪ್ಪ (45), ಸುನೀಲ (26) ಮೃತ ದುರ್ದೈವಿಗಳು. ವಿನೋದ (14) ಸ್ಥಿತಿ ಗಂಭೀರವಾಗಿದೆ.
ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಮಳೆ ಬಂದಾಗ ಗಿಡದ ಆಶ್ರಯ ಪಡೆದಿದ್ದ ಇವರ ಮೇಲೆ ಯಮನಂತೆ ಬಂದು ಸಿಡಿಲು ಅಪ್ಪಳಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ.. ವರ್ಷಧಾರೆಯಿಂದ ಹಲವೆಡೆ ಜನರ ಪರದಾಟ; ಎಲ್ಲೆಲ್ಲಿ ಏನಾಯ್ತು?
ಅಂದ್ಹಾಗೆ ಇಂದು ಸಂಜೆ ವೇಳೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರು ಕೂಡ ಹೊರತಾಗಿಲ್ಲ. ಬಾಗಲಕೋಟೆ, ಚಿಕ್ಕಮಗಳೂರು, ವಿಜಯಪುರ, ವಿಜಯನಗರ, ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ.
ಇದನ್ನೂ ಓದಿ: ಆಲಿಕಲ್ಲು ಮಳೆಯ ಆರ್ಭಟ.. ಒಂದೇ ಗಂಟೆಗೆ ಬೆಂಗಳೂರು ನಗರದಲ್ಲಿ ಹಲವು ಅವಾಂತರ; ಆಗಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ