/newsfirstlive-kannada/media/post_attachments/wp-content/uploads/2025/07/R-ASHOK-ON-DHARMASTALA-CASE-1.jpg)
ಧರ್ಮಸ್ಥಳ ಕೇಸ್ಗೆ ಸಂಬಂಧಿಸಿ ವಿಪಕ್ಷ ನಾಯಕ ಆರ್.ಅಶೋಕ್ ಮೈಸೂರಲ್ಲಿ ಪ್ರತಿಕ್ರಿಯಿಸಿ.. ‘ಅನಾಮಧೇಯ ವ್ಯಕ್ತಿಯ ಹಿಂದೆ ಕೇರಳ ಸರ್ಕಾರ ಇದೆ. ಇಲ್ಲಿ ಯಾರಿಗೂ ಕಾಣದ ಕೈ ಕೆಲ್ಸ ಮಾಡ್ತಿದೆ. ಪ್ರಕರಣ ಜಟಿಲ ಆಗ್ತಿಲ್ಲ, ಜಟಿಲ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೋಪ ಮಾಡುತ್ತಿರೋದು ಯಾರೋ ಒಬ್ಬ ಮುಸ್ಲಿಂ ವ್ಯಕ್ತಿ. ಈ ಕೇಸ್ ಬ್ಯಾಗ್ರೌಂಡ್ ಹಿಂದೆ ಇರೋದು ಕೇರಳ ಸರ್ಕಾರ. ಧರ್ಮಸ್ಥಳಕ್ಕೂ ಕೇರಳಕ್ಕೂ ಏನು ಸಂಬಂಧ? ಪ್ರಕರಣವನ್ನು ಎಸ್ಐಟಿಗೆ ವರ್ಗಾವಣೆ ಮಾಡಿದ್ದಾರೆ, ಸ್ವಾಗತ ಮಾಡ್ತೀನಿ. ಧರ್ಮಸ್ಥಳದವರು ಕೂಡ ಸ್ವಾಗತಿಸಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಕೇಸ್ ಬಿಗ್ ಅಪ್ಡೇಟ್ಸ್.. ಬುರುಡೆ ರಹಸ್ಯಕ್ಕಾಗಿ ದೂರುದಾರನ ಜೊತೆ ಕಾಡಿಗೆ ಎಂಟ್ರಿ..!
ಈ ಪ್ರಗತಿಪರರ ಗ್ಯಾಂಗ್ ನಾಳೆ ಎಸ್ಐಟಿಯನ್ನು ಒಪ್ಪಲ್ಲ. ಅದು ಕೂಡ ಸರಿಯಾಗಿ ತನಿಖೆ ಮಾಡಿಲ್ಲ ಅಂತಾರೆ. ಅವರ ಪರ ರಿಪೋರ್ಟ್ ಕೊಟ್ರೆ ಸರಿ ಎಂದು ಒಪ್ಪಿಕೊಳ್ಳುತ್ತಾರೆ. ಈ ಕಾರಣಕ್ಕೆ ಸಿಎಂ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಆಗ್ರಹಿಸಿದರು.
ಬಂದಿರುವ ವ್ಯಕ್ತಿ ಬುರುಡೆ ಕೊಡ್ತಾನೋ. ಬುರುಡೆ ಬಿಡ್ತಾನೋ ಕಾದು ನೋಡೋಣ. ಈ ಧರ್ಮಸ್ಥಳದ ಸುದ್ದಿ ಅಲ್ಲಜ್ಮೀರಾ ಕೇರಳದಲ್ಲಿ ಚರ್ಚೆ ಆಗ್ತಿದೆ. ಇದರ ಹಿಂದಿನ ಷಡ್ಯಂತ್ರ ತನಿಖೆಯಲ್ಲಿ ಹೊರ ಬರಲಿದೆ. ಬಳಿಕ ನಾನು ಮತ್ತಷ್ಟು ಪ್ರತಿಕ್ರಿಯೆ ನೀಡುತ್ತೇನೆ ಎಂದು ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಕೆಟ್ಟದಾಗಿ ಕಮೆಂಟ್ ಮಾಡಿದವ್ರಿಗೆ ಪುಕಪುಕ.. ರಮ್ಯಾ ಒಬ್ಬರಿಂದಲೇ ಅಲ್ಲ, ಬಿತ್ತು ಮತ್ತೊಂದು ಕೇಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ