newsfirstkannada.com

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಕೋಪತಾಪ; ಕಾರಣವೇನು?

Share :

Published August 14, 2024 at 6:12pm

    ಪೊಲೀಸರ ಮೇಲಿನ ಕೋಪಕ್ಕೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ

    ಚಳ್ಳಕೆರೆಯಿಂದ ವಿಧಾನಸೌಧಕ್ಕೆ ಬಂದು ಸರ್ಕಾರದ ಮೇಲೆ ಆಕ್ರೋಶ

    ಚಳ್ಳಕೆರೆ ಠಾಣೆಯ ಪೊಲೀಸರ ವಿರುದ್ಧ ಯುವಕನ ಗಂಭೀರ ಆರೋಪ

ಬೆಂಗಳೂರು: ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚುವ ಮೂಲಕ ಯುವಕನೊಬ್ಬ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇವನ ಆಕ್ರೋಶಕ್ಕೆ ಕಾರಣವಾಗಿರೋದು ಪೊಲೀಸರಿಂದ ತಾಯಿಯ ನಿಂದನೆ ಎನ್ನಲಾಗಿದೆ. ಪೊಲೀಸರ ಮೇಲಿನ ಕೋಪಕ್ಕೆ ಯುವಕ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ: ನಾಗದರ್ಶನ.. ಕಲಾವಿದರ ಸಂಘದಲ್ಲಿ ಹಿರಿಯ ನಟಿ ಮೈ ಮೇಲೆ ಬಂದ ದೇವರು; ಯಾರು ಈ ಜ್ಯೋತಿ? ಹಿನ್ನೆಲೆ ಏನು?

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನನ್ನು ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಪೃಥ್ವಿ ಟ್ರಕ್ಕಿಂಗ್‌ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಅದಕ್ಕೆ ಗಾಬರಿಯಾದ ಪೃಥ್ವಿ ಅವರ ತಾಯಿ ಚಳ್ಳಕೆರೆ ಪೊಲೀಸರ ಮೊರೆ ಹೋಗಿದ್ದಾರೆ.

ಯುವಕನ ತಾಯಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆಗ ಪೊಲೀಸರು ಪೃಥ್ವಿ ತಾಯಿನ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಅಂತ ಯುವಕ ಆರೋಪಿಸಿದ್ದಾನೆ. ಪೊಲೀಸರ ಮೇಲಿನ ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಬೆಂಕಿ ಇಟ್ಟಿದ್ದಾನೆ.

ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ 5 ದಿನ ಭರ್ಜರಿ ಮಳೆ; ಈ ರಸ್ತೆಗಳಲ್ಲಿ ಓಡಾಡೋ ಮುನ್ನ ಎಚ್ಚರ! 

ಬೈಕ್‌ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯುವಕನನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕನ ಆರೋಪದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆ ಕೈಗೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಕೋಪತಾಪ; ಕಾರಣವೇನು?

https://newsfirstlive.com/wp-content/uploads/2024/08/Vidhansoudha-Bike-Fire-1.jpg

    ಪೊಲೀಸರ ಮೇಲಿನ ಕೋಪಕ್ಕೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ

    ಚಳ್ಳಕೆರೆಯಿಂದ ವಿಧಾನಸೌಧಕ್ಕೆ ಬಂದು ಸರ್ಕಾರದ ಮೇಲೆ ಆಕ್ರೋಶ

    ಚಳ್ಳಕೆರೆ ಠಾಣೆಯ ಪೊಲೀಸರ ವಿರುದ್ಧ ಯುವಕನ ಗಂಭೀರ ಆರೋಪ

ಬೆಂಗಳೂರು: ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚುವ ಮೂಲಕ ಯುವಕನೊಬ್ಬ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇವನ ಆಕ್ರೋಶಕ್ಕೆ ಕಾರಣವಾಗಿರೋದು ಪೊಲೀಸರಿಂದ ತಾಯಿಯ ನಿಂದನೆ ಎನ್ನಲಾಗಿದೆ. ಪೊಲೀಸರ ಮೇಲಿನ ಕೋಪಕ್ಕೆ ಯುವಕ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ: ನಾಗದರ್ಶನ.. ಕಲಾವಿದರ ಸಂಘದಲ್ಲಿ ಹಿರಿಯ ನಟಿ ಮೈ ಮೇಲೆ ಬಂದ ದೇವರು; ಯಾರು ಈ ಜ್ಯೋತಿ? ಹಿನ್ನೆಲೆ ಏನು?

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನನ್ನು ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಪೃಥ್ವಿ ಟ್ರಕ್ಕಿಂಗ್‌ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಅದಕ್ಕೆ ಗಾಬರಿಯಾದ ಪೃಥ್ವಿ ಅವರ ತಾಯಿ ಚಳ್ಳಕೆರೆ ಪೊಲೀಸರ ಮೊರೆ ಹೋಗಿದ್ದಾರೆ.

ಯುವಕನ ತಾಯಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆಗ ಪೊಲೀಸರು ಪೃಥ್ವಿ ತಾಯಿನ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಅಂತ ಯುವಕ ಆರೋಪಿಸಿದ್ದಾನೆ. ಪೊಲೀಸರ ಮೇಲಿನ ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಬೆಂಕಿ ಇಟ್ಟಿದ್ದಾನೆ.

ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ 5 ದಿನ ಭರ್ಜರಿ ಮಳೆ; ಈ ರಸ್ತೆಗಳಲ್ಲಿ ಓಡಾಡೋ ಮುನ್ನ ಎಚ್ಚರ! 

ಬೈಕ್‌ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯುವಕನನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕನ ಆರೋಪದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆ ಕೈಗೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More