/newsfirstlive-kannada/media/post_attachments/wp-content/uploads/2025/04/Shehbaz.jpg)
ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸಿಂಧೂ ನದಿ ನೀರು ಒಪ್ಪಂದ ತಾತ್ಕಾಲಿಕವಾಗಿ ಅಮಾನತಿನಲ್ಲಿಡುವ ಮೂಲಕ ಭಾರತ ಸರ್ಕಾರ ಪಾಕ್ಗೆ ದೊಡ್ಡ ಆಘಾತ ನೀಡಿದೆ. ಭಾರತದ ಈ ಕ್ರಮಕ್ಕೆ ಹೆದರಿರುವ ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದಿದೆ. ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರೇ ಈ ಬಗ್ಗೆ ಖುದ್ದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿಗೆ ಭಾರತದ ಪ್ರತೀಕಾರ ಹೇಗೆ? 3 ಹಂತದಲ್ಲಿ ಪಾಕ್ ಸೊಕ್ಕು ಮುರಿಯಲು ನಿರ್ಧಾರ
ಭಾರತ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಲು ಗುರುವಾರ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆಯಲಾಗುವುದು ಎಂದಿದ್ದಾರೆ. ನಿನ್ನೆ ಸಂಜೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಭದ್ರತಾ ಸಮಿತಿ (CCS)ಯ ತುರ್ತು ಸಭೆ ನಡೆಯಿತು. ಈ ವೇಳೆ ಪಹಲ್ಗಾಮ್ ದಾಳಿಗೆ ಸಂಬಂಧಿಸಿ ಮಹತ್ವದ ಚರ್ಚೆ ಆಗಿದೆ. ಬಳಿಕ ಪಾಕ್ಗೆ ಪಾಠ ಕಲಿಸಲು ಪ್ರಮುಖ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮೋದಿ ಮೀಟಿಂಗ್ನಲ್ಲಿ ತೆಗೆದುಕೊಂಡ ನಿರ್ಧಾರಗಳು..!
- ಸಿಂಧೂ ನದಿ ನೀರು ಒಪ್ಪಂದ ಈ ಕ್ಷಣದಿಂದಲೇ ಅಮಾನತಿನಲ್ಲಿ ಇಡಲಾಗುತ್ತೆ
- ಭಾರತ ಪಾಕಿಸ್ತಾನ ಗಡಿಯ ಅಠಾರಿ ಚೆಕ್ಪೋಸ್ಟ್ ಈ ಕ್ಷಣದಿಂದಲೇ ಕ್ಲೋಸ್
- ಪಾಕಿಸ್ತಾನಕ್ಕೆ ಹೋಗಿರುವವರು ಮೇ.1ರ ಒಳಗಾಗಿ ಭಾರತಕ್ಕೆ ಮರಳಬೇಕು
- SAARC ವೀಸಾ ಅಡಿ ಪಾಕಿಸ್ತಾನದ ನಾಗರಿಕರಿಗೆ ಭಾರತಕ್ಕೆ ಪ್ರವೇಶವಿಲ್ಲ
- ಈ ಹಿಂದೆ ಪಾಕ್ ನಾಗರಿಕರಿಗೆ ನೀಡಲಾಗಿರುವ ವಿಶೇಷ ವೀಸಾಗಳೂ ರದ್ದು
- ಭಾರತದಲ್ಲಿರೋ ಪಾಕ್ ಪ್ರಜೆಗಳಿಗೆ ಇಲ್ಲಿಂದ ತೆರಳಲು 48 ಗಂಟೆಗಳ ಗಡುವು
- ಪಾಕ್ನ ರಾಯಭಾರ ಕಚೇರಿ ಅಧಿಕಾರಿಗಳಿಗೆ ಭಾರತ ಬಿಡಲು ವಾರದ ಗಡುವು
- ಪಾಕ್ನ 3 ಸೇನೆಯ ಅಡ್ವೈಸರ್ಗಳಿಗೆ ಭಾರತ ಬಿಡೋದಕ್ಕೆ ಕಡ್ಡಾಯ ಆದೇಶ
- ಇಸ್ಲಾಮಾಬಾದ್ನ ಭಾರತೀಯ ಹೈಕಮಿಷನ್ನಲ್ಲಿರೋ ಅಧಿಕಾರಿಗಳೂ ವಾಪಸ್
- ಭಾರತದ ಮೂರು ಸೇನೆಯ ಅಡ್ವೈಸರ್ಗಳಿಗೆ ಭಾರತಕ್ಕೆ ಮರಳೋಕೆ ಸೂಚನೆ
- ಭಾರತದಲ್ಲಿರೋ ಪಾಕ್ ರಾಯಭಾರ ಕಚೇರಿಯ ಸಿಬ್ಬಂದಿ ಸಂಖ್ಯೆ 30ಕ್ಕೆ ಇಳಿಕೆ
- ಭೂ ಸೇನೆ, ವಾಯು, ನೌಕಾ ಸೇನೆಗಳಿಗೆ ಹದ್ದಿನ ಕಣ್ಗಾವಲಿಡೋಕೆ ಸೂಚನೆ
ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ವಿರುದ್ಧ BSF ಕೂಂಬಿಂಗ್ ತೀವ್ರ; ಓರ್ವ ಯೋಧ ಹುತಾತ್ಮ
Prime Minister Mohammad Shehbaz Sharif @CMShehbaz has convened the meeting of the National Security Committee on Thursday morning 24th April 2025 to respond to the Indian Government’s statement of this evening.
— Ishaq Dar (@MIshaqDar50) April 23, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ