newsfirstkannada.com

ತಾನು CM ಆಗೋ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಹೇಳಿದ್ದೇನು..?

Share :

09-09-2023

    ಪರಮೇಶ್ವರ್​​ಗೆ ಸಿಎಂ ಆಗೋ ಅರ್ಹತೆ ಇದೆ ಎಂದ ಹರಿಪ್ರಸಾದ್​​

    ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಗೃಹ ಸಚಿವ ಪರಮೇಶ್ವರ್​ ಹೀಗಂದ್ರು!

    ನನ್ನ ಮೇಲೆ ಅಭಿಮಾನದಿಂದ ಹೇಳಿದ್ದಾರೆ ಎಂದಿದ್ಯಾಕೆ ಪರಮೇಶ್ವರ್​​?

ತುಮಕೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಈಗಷ್ಟೇ ಕಾಂಗ್ರೆಸ್​​ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ನೀಡಿದ ಭವಸೆಗಳನ್ನು ಈಡೇರಿಸಲು ಮುಂದಾಗಿದೆ. ಹೀಗಿರುವಾಗಲೇ ಕಾಂಗ್ರೆಸ್​​ ಅಸಮಾಧಾನದ ಹೊಗೆಯಾಡುತ್ತಿದೆ.

ಹೌದು, ತನ್ನನ್ನ ಮಂತ್ರಿ ಮಾಡದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್​ ಆಕ್ರೋಶ ಹೊರಹಾಕಿದ್ದಾರೆ. ಜತೆಗೆ ಡಾ.ಜಿ ಪರಮೇಶ್ವರ್​​ಗೆ ಡಿಸಿಎಂ ಸ್ಥಾನ ನೀಡಬೇಕಿತ್ತು, ಇದು ನಾವು ತಲೆ ತಗ್ಗಿಸುವ ವಿಚಾರ ಎಂದಿದ್ದಾರೆ. ಪರಮೇಶ್ವರ್​​ ಸಿಎಂ ಆಗಲು ಅರ್ಹ ಇರೋ ವ್ಯಕ್ತಿ ಎಂದಿದ್ದಾರೆ. ಈ ಬಗ್ಗೆ ಸದ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್​ ಪ್ರತಿಕ್ರಿಯಿಸಿದ್ದಾರೆ.

ನಾನು ಸಿಎಂ ಆಗಬೇಕು ಎಂದಿದ್ದಕ್ಕೆ ಬಿ.ಕೆ ಹರಿಪ್ರಸಾದ್​ಗೆ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಮೇಲಿನ ಅಭಿಮಾನಕ್ಕೆ ಹೇಗೆ ಎಂದಿದ್ದಾರೆ. ಬಹಳ ಮಂದಿ ನಾನು ಸಿಎಂ ಆಗಬೇಕು ಎಂದು ಆಸೆಪಟ್ಟಿದ್ದಾರೆ. ಇದು ಅವರ ಅಭಿಮಾನ. ಯಾರು ಸಿಎಂ ಆಗಬೇಕು ಎಂಬುದು ಹೈಕಮಾಂಡ್​ ತೀರ್ಮಾನ ಮಾಡಲಿದೆ ಎಂದರು.

ಹೈಕಮಾಂಡ್​ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲಾಗಿದೆ. ಡಿ.ಕೆ ಶಿವಕುಮಾರ್​ ಅವರಿಗೆ ಡಿಸಿಎಂ ಪಟ್ಟ ನೀಡಲಾಗಿದೆ. ನನಗೆ ಮುಂದೆ ಸಿಎಂ ಆಗೋ ಅವಕಾಶ ಸಿಕ್ಕರೆ ನೋಡೋಣ ಎಂದು ಹೇಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಾನು CM ಆಗೋ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಹೇಳಿದ್ದೇನು..?

https://newsfirstlive.com/wp-content/uploads/2023/07/Parameshwar-2.jpg

    ಪರಮೇಶ್ವರ್​​ಗೆ ಸಿಎಂ ಆಗೋ ಅರ್ಹತೆ ಇದೆ ಎಂದ ಹರಿಪ್ರಸಾದ್​​

    ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಗೃಹ ಸಚಿವ ಪರಮೇಶ್ವರ್​ ಹೀಗಂದ್ರು!

    ನನ್ನ ಮೇಲೆ ಅಭಿಮಾನದಿಂದ ಹೇಳಿದ್ದಾರೆ ಎಂದಿದ್ಯಾಕೆ ಪರಮೇಶ್ವರ್​​?

ತುಮಕೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಈಗಷ್ಟೇ ಕಾಂಗ್ರೆಸ್​​ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ನೀಡಿದ ಭವಸೆಗಳನ್ನು ಈಡೇರಿಸಲು ಮುಂದಾಗಿದೆ. ಹೀಗಿರುವಾಗಲೇ ಕಾಂಗ್ರೆಸ್​​ ಅಸಮಾಧಾನದ ಹೊಗೆಯಾಡುತ್ತಿದೆ.

ಹೌದು, ತನ್ನನ್ನ ಮಂತ್ರಿ ಮಾಡದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್​ ಆಕ್ರೋಶ ಹೊರಹಾಕಿದ್ದಾರೆ. ಜತೆಗೆ ಡಾ.ಜಿ ಪರಮೇಶ್ವರ್​​ಗೆ ಡಿಸಿಎಂ ಸ್ಥಾನ ನೀಡಬೇಕಿತ್ತು, ಇದು ನಾವು ತಲೆ ತಗ್ಗಿಸುವ ವಿಚಾರ ಎಂದಿದ್ದಾರೆ. ಪರಮೇಶ್ವರ್​​ ಸಿಎಂ ಆಗಲು ಅರ್ಹ ಇರೋ ವ್ಯಕ್ತಿ ಎಂದಿದ್ದಾರೆ. ಈ ಬಗ್ಗೆ ಸದ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್​ ಪ್ರತಿಕ್ರಿಯಿಸಿದ್ದಾರೆ.

ನಾನು ಸಿಎಂ ಆಗಬೇಕು ಎಂದಿದ್ದಕ್ಕೆ ಬಿ.ಕೆ ಹರಿಪ್ರಸಾದ್​ಗೆ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ಮೇಲಿನ ಅಭಿಮಾನಕ್ಕೆ ಹೇಗೆ ಎಂದಿದ್ದಾರೆ. ಬಹಳ ಮಂದಿ ನಾನು ಸಿಎಂ ಆಗಬೇಕು ಎಂದು ಆಸೆಪಟ್ಟಿದ್ದಾರೆ. ಇದು ಅವರ ಅಭಿಮಾನ. ಯಾರು ಸಿಎಂ ಆಗಬೇಕು ಎಂಬುದು ಹೈಕಮಾಂಡ್​ ತೀರ್ಮಾನ ಮಾಡಲಿದೆ ಎಂದರು.

ಹೈಕಮಾಂಡ್​ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲಾಗಿದೆ. ಡಿ.ಕೆ ಶಿವಕುಮಾರ್​ ಅವರಿಗೆ ಡಿಸಿಎಂ ಪಟ್ಟ ನೀಡಲಾಗಿದೆ. ನನಗೆ ಮುಂದೆ ಸಿಎಂ ಆಗೋ ಅವಕಾಶ ಸಿಕ್ಕರೆ ನೋಡೋಣ ಎಂದು ಹೇಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More