/newsfirstlive-kannada/media/post_attachments/wp-content/uploads/2025/06/air-india9.jpg)
ಗುಜರಾತ್​ನ ಅಹಮದಾಬಾದ್​ನಲ್ಲಿ ಏರ್​ ಇಂಡಿಯಾ ವಿಮಾನ ಪತನಗೊಂಡು 270ಕ್ಕೂ ಹೆಚ್ಚು ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್​ಗೆ ಹೊರಟಿದ್ದ ಬೋಯಿಂಗ್​ ಡ್ರೀಮ್​ಲೈನರ್​ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಅಚ್ಚರಿ ಎಂಬಂತೆ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್​ ರಮೇಶ್ ಮಾತ್ರ ಬದುಕಿ ಬಂದಿದ್ದಾರೆ.
ಇದನ್ನೂ ಓದಿ:ಬರೀ ‘‘MAYDAY.. MAYDAY’ ಅಲ್ಲ.. ಪತನದ ಕೊನೆ ಕ್ಷಣದಲ್ಲಿ ಪೈಲಟ್ ಹೇಳಿದ್ದೇನು? ಥ್ರಸ್ಟ್ ಅಂದರೇನು..?
/newsfirstlive-kannada/media/post_attachments/wp-content/uploads/2025/06/air-india10.jpg)
ಇನ್ನೂ, ವಿಮಾನ ದುರಂತದ ನಿಖರ ಕಾರಣವನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಏರ್ ಇಂಡಿಯಾ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು, 25 ಲಕ್ಷ ರೂ ಹೆಚ್ಚು ಮಾಡಿದೆ. ಈ ದುರಂತ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ದುಬೈನಿಂದ ಜೈಪುರದವರೆಗೆ ಏರ್​ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಹೋಗುತ್ತಿರೋ ನೂರಾರು ಪ್ರಯಾಣಿಕರು ಪ್ರಾಣ ಭಯದಲ್ಲಿದ್ದಾರೆ.
View this post on Instagram
ಹೌದು, ಏರ್​ ಇಂಡಿಯಾ ವಿಮಾನ 1x196 ವಿಮಾನದ ಸಿಬ್ಬಂದಿ ಬೇಜವಬ್ದಾರಿಯಿಂದ ನೂರಾರು ಪ್ರಯಾಣಿಕರು ಪ್ರಾಣ ಭಯದಲ್ಲಿದ್ದಾರೆ. ವಿಮಾನ ಹಾರಾಟ ಆರಂಭಿಸಿ 5 ಗಂಟೆ ಕಳೆದರೂ ಎಸಿ (Air Conditioner) ಆನ್​ ಆಗಿಲ್ಲ. ಆಕಾಶದಲ್ಲಿ ಹಾರಾಟ ನಡೆಸುವಾಗ ನೂರಾರು ಪ್ರಯಾಣಿಕರು ಬೆವರಿನಲ್ಲೇ ಮುಳುಗಿದ್ದರು. ಸೆಕೆ ತಾಳಲಾರದೆ ಬುಕ್​, ಬಟ್ಟೆಯ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಸಹಾಯಕ್ಕೆ ಏರ್​ ಇಂಡಿಯಾ ಸಿಬ್ಬಂದಿಯನ್ನು ಕರೆದರು ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಮಹಿಳೆಯೊಬ್ಬರು ವಿಡಿಯೋ ಮಾಡುವ ಮೂಲಕ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us