Advertisment

ವಜ್ರ ಮುನೇಶ್ವರ ದೇವಾಲಯದ ಮುಂದೆ ಪವಿತ್ರಾ ಗೌಡ ತೀರ್ಥಸ್ನಾನ.. ದರ್ಶನ್ ಹೆಸರಲ್ಲಿ ಅರ್ಚನೆ

author-image
Bheemappa
Updated On
ಮಡಿಲಕ್ಕಿ ಕೊಟ್ಟು ಕಾನೂನು ಸಂಕಷ್ಟದಿಂದ ಪಾರು ಮಾಡುವಂತೆ ಶಕ್ತಿ ದೇವತೆಗೆ ‘ಪವಿತ್ರ’ ಪ್ರಾರ್ಥನೆ..!
Advertisment
  • ಜೈಲು ಪ್ರಕ್ರಿಯೆಗಳು ಮುಗಿದ ಹಿನ್ನೆಲೆಯಲ್ಲಿ ಇಂದು ಬಿಡುಗಡೆ
  • ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ
  • ಜೈಲಿನ ಆವರಣದಲ್ಲಿನ ಮುನೇಶ್ವರನಿಗೂ ಪೂಜೆ ಮಾಡಿದ್ರು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿರುವ ಪವಿತ್ರಾ ಗೌಡ ಅವರು ನೇರ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯಕ್ಕೆ ತೆರಳಿದ್ದಾರೆ. ಬಳಿಕ ದೇವಾಲಯದಲ್ಲಿ ಪವಿತ್ರಾ ತೀರ್ಥಸ್ನಾನ ಮಾಡಿದ್ದಾರೆ.

Advertisment

ಕನಕಪುರ ರಸ್ತೆಯ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಪವಿತ್ರಾಗೌಡ ಅವರ ತಾಯಿಯ ಮನೆ ದೇವರು ಆಗಿದೆ. ಹೀಗಾಗಿ ಜೈಲಿನಿಂದ ಪವಿತ್ರಾಗೌಡ ಬಿಡುಗಡೆ ಆದ ಮೇಲೆ ಅವರ ತಾಯಿ ಮೊದಲು ಜೈಲಿನ ಆವರಣದಲ್ಲಿರುವ ಮುನೇಶ್ವರನಿಗೆ ಪೂಜೆ ಸಲ್ಲಿಕೆ ಮಾಡಿದ್ದರು. ಇದಾದ ಮೇಲೆ ನೇರ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಭೇಟಿ ಕೊಟ್ಟಿದ್ದರು. ಈ ವೇಳೆ ದೇವಾಲಯದ ಮುಂದೆ ಪವಿತ್ರಾಗೌಡ ತೀರ್ಥಸ್ನಾನ ಮಾಡಿದ್ದಾರೆ. ದೇವರಿಗೆ ಹೂವು, ಕಾಯಿ, ಆಗರಬತ್ತಿ, ನಿಂಬೆಹಣ್ಣು ಸಮೇತ ವಿಶೇಷ ಪೂಜೆ ಮಾಡಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ರಿಲೀಸ್ ಆಗ್ತಿದ್ದಂತೆ ತಾಯಿನಾ ತಬ್ಬಿಕೊಂಡು ಪವಿತ್ರಾ ಗೌಡ ಭಾವುಕ

publive-image

ವಜ್ರಮುನೇಶ್ವರ ದೇವಾಲಯದಲ್ಲಿ ಕುಟುಂಬದ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಈ ವೇಳೆ ಕೊನೆಯಲ್ಲಿ ದರ್ಶನ್ ಅವರ ಹೆಸರನ್ನು ಕೂಡ ಪೂಜಾರಿಗಳಿಗೆ ಹೇಳಲಾಗಿದೆ. ಹೀಗಾಗಿ ಪೂಜಾರಿ ದರ್ಶನ್ ಹೆಸರಲ್ಲಿ ಅರ್ಚನೆ ಮಾಡಿದ್ದಾರೆ.

Advertisment

ಸದ್ಯ ಪವಿತ್ರಾ ಗೌಡ ರಿಲೀಸ್ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಖುಷಿ ದುಪ್ಪಟ್ಟು ಆಗಿದೆ. 6 ತಿಂಗಳ ಬಳಿಕ ಜೈಲಿನಿಂದ ಪವಿತ್ರಾ ಗೌಡ ಬರುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಸಂತಸದ ವಾತಾವರಣ ಏರ್ಪಟ್ಟಿದೆ. ಇಂದು ಮನೆ ದೇವರ ಎಲ್ಲ ಕಾರ್ಯಗಳನ್ನು ಮುಗಿಸಿದ ಬಳಿಕ ತಮ್ಮ ನಿವಾಸದ ಕಡೆಗೆ ತೆರಳುತ್ತಾರೆ. ಜೈಲಿನಿಂದ ಬಿಡುಗಡೆ ಆದ ನಂತರ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment