ಕರ್ನಾಟಕ ನೆರೆರಾಷ್ಟ್ರ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್
ಸಿಎಂ ಜಗನ್ ಮೋಹನ್ ರೆಡ್ಡಿ ವೈಎಸ್ಆರ್ ಕಾಂಗ್ರೆಸ್ಗೆ ಸೋಲು!
ಆಂಧ್ರಪ್ರದೇಶದ ಪೀಠಾಪುರಂ ಕ್ಷೇತ್ರದಿಂದ ಗೆದ್ದು ಬೀಗಿದ ಪವನ್
ಅಮರಾವತಿ: ಜನಸೇನಾ ಪಕ್ಷದ ಅಧ್ಯಕ್ಷ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಸಿಎಂ ಜಗನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ವಂಗಾ ಗೀತಾ ವಿಶ್ವನಾಥ್ ವಿರುದ್ಧ ಬರೋಬ್ಬರಿ 70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಟ ಪವನ್ ಕಲ್ಯಾಣ್ ಅವರಿಗೆ ಬರೋಬ್ಬರಿ 130259 ಮತಗಳು ಲಭಿಸಿವೆ. ವಂಗಾ ಗೀತಾ ವಿಶ್ವನಾಥ್ ಅವರಿಗೆ ಕೇವಲ 62416 ವೋಟ್ ಬಿದ್ದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಪವನ್ ಕಲ್ಯಾಣ್ ಅವರು ಈ ಸಲ ಗೆದ್ದು ದಾಖಲೆ ಸೃಷ್ಟಿಸಿದ್ದಾರೆ.
ಕರ್ನಾಟಕ ನೆರೆರಾಷ್ಟ್ರ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 5 ವರ್ಷಗಳ ಬಳಿಕ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಗೆಲುವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲಾಗಿದೆ.
ಆಂಧ್ರಪ್ರದೇಶದಲ್ಲಿ ಲೋಕಸಭಾ ಜೊತೆಗೆ ವಿಧಾನಸಭಾ ಚುನಾವಣೆ ಕೂಡ ನಡೆದಿದೆ. 175 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದೆ. ಟಿಡಿಪಿ ಬರೋಬ್ಬರಿ 130 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 20 ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವತ್ತ ಹೆಜ್ಜೆ ಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ.
ಜೂನ್ 9ನೇ ತಾರೀಕಿನಂದು ಆಂಧ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಟ ಪವನ್ ಕಲ್ಯಾಣ್ ಡಿಸಿಎಂ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಆಂಧ್ರದಲ್ಲಿ ಜಗನ್ಗೆ ಹೀನಾಯ ಸೋಲು; ಪವನ್ ಕಲ್ಯಾಣ್, ನಾಯ್ಡು ಮೈತ್ರಿಗೆ ಭರ್ಜರಿ ಜಯ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಕರ್ನಾಟಕ ನೆರೆರಾಷ್ಟ್ರ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್
ಸಿಎಂ ಜಗನ್ ಮೋಹನ್ ರೆಡ್ಡಿ ವೈಎಸ್ಆರ್ ಕಾಂಗ್ರೆಸ್ಗೆ ಸೋಲು!
ಆಂಧ್ರಪ್ರದೇಶದ ಪೀಠಾಪುರಂ ಕ್ಷೇತ್ರದಿಂದ ಗೆದ್ದು ಬೀಗಿದ ಪವನ್
ಅಮರಾವತಿ: ಜನಸೇನಾ ಪಕ್ಷದ ಅಧ್ಯಕ್ಷ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಸಿಎಂ ಜಗನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ವಂಗಾ ಗೀತಾ ವಿಶ್ವನಾಥ್ ವಿರುದ್ಧ ಬರೋಬ್ಬರಿ 70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಟ ಪವನ್ ಕಲ್ಯಾಣ್ ಅವರಿಗೆ ಬರೋಬ್ಬರಿ 130259 ಮತಗಳು ಲಭಿಸಿವೆ. ವಂಗಾ ಗೀತಾ ವಿಶ್ವನಾಥ್ ಅವರಿಗೆ ಕೇವಲ 62416 ವೋಟ್ ಬಿದ್ದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಪವನ್ ಕಲ್ಯಾಣ್ ಅವರು ಈ ಸಲ ಗೆದ್ದು ದಾಖಲೆ ಸೃಷ್ಟಿಸಿದ್ದಾರೆ.
ಕರ್ನಾಟಕ ನೆರೆರಾಷ್ಟ್ರ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 5 ವರ್ಷಗಳ ಬಳಿಕ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಗೆಲುವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲಾಗಿದೆ.
ಆಂಧ್ರಪ್ರದೇಶದಲ್ಲಿ ಲೋಕಸಭಾ ಜೊತೆಗೆ ವಿಧಾನಸಭಾ ಚುನಾವಣೆ ಕೂಡ ನಡೆದಿದೆ. 175 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದೆ. ಟಿಡಿಪಿ ಬರೋಬ್ಬರಿ 130 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 20 ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವತ್ತ ಹೆಜ್ಜೆ ಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ.
ಜೂನ್ 9ನೇ ತಾರೀಕಿನಂದು ಆಂಧ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಟ ಪವನ್ ಕಲ್ಯಾಣ್ ಡಿಸಿಎಂ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಆಂಧ್ರದಲ್ಲಿ ಜಗನ್ಗೆ ಹೀನಾಯ ಸೋಲು; ಪವನ್ ಕಲ್ಯಾಣ್, ನಾಯ್ಡು ಮೈತ್ರಿಗೆ ಭರ್ಜರಿ ಜಯ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್