ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯ
CSKಯ ಇಬ್ಬರನ್ನು ಡಕೌಟ್ ಮಾಡಿದ ಪಂಜಾಬ್ ಬೌಲರ್ಸ್
ಪಂಜಾಬ್ ಪರ ಭರ್ಜರಿ ಬೌಲಿಂಗ್ ಮಾಡಿದ ಹರ್ಷಲ್, ರಾಹುಲ್
ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 168 ರನ್ಗಳ ಟಾರ್ಗೆಟ್ ನೀಡಿದೆ.
ಪಂದ್ಯ ಆರಂಭಕ್ಕೂ ಮೊದಲು ಟಾಸ್ ಗೆದ್ದು ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಚೆನ್ನೈ ಪರ ಆರಂಭೀಕರಾಗಿ ಬ್ಯಾಟಿಂಗ್ ಮಾಡಲು ಬಂದ ಅಜಿಂಕ್ಯಾ ರಹಾನೆ, ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಆಘಾತಕ್ಕೆ ಒಳಗಾದರು. ತಂಡದ ಮೊತ್ತ ಕೇವಲ 12 ರನ್ ಇರುವಾಗಲೇ ರಹಾನೆ ರಬಾಡಾಗೆ ಕ್ಯಾಚ್ ಕೊಟ್ಟು ಔಟ್ ಆದರು. ಇದಾದ ಬಳಿಕ ರುತುರಾಜ್ ಗಾಯಕ್ವಾಡ್ ಕೂಡ 32 ರನ್ಗೆ ಪೆವಿಲಿಯನ್ ನಡೆಸಿದರು. ನಂತರ ಬಂದ ಮಿಚೆಲ್ ಸ್ವಲ್ಪ ಹೊತ್ತು ಕ್ರೀಸ್ ಕಾಯ್ದುಕೊಂಡು 30 ರನ್ ಗಳಿಸಿ ಎಲ್ಬಿ ಬಲೆಗೆ ಬಿದ್ದರು. ಇನ್ನು ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಮಾಡಿ 43 ರನ್ ಗಳಿಸಿ ತಂಡಕ್ಕೆ ಆಸರೆ ಆದರು. ಇವರನ್ನು ಬಿಟ್ಟರೇ ಧೋನಿ ಸೇರಿ ಉಳಿದ ಬ್ಯಾಟ್ಸ್ಮನ್ಗಳೆಲ್ಲ 20 ರನ್ ಗಳಿಸಿದಕ್ಕೂ ಮೊದಲೇ ಪೆವಿಲಿಯನ್ ಪೆರೇಡ್ ನಡೆಸಿದರು.
ಇದನ್ನೂ ಓದಿ: ಕೊಹ್ಲಿ ಕ್ರಿಕೆಟರ್ ಆಗದಿದ್ರೆ, ಏನಾಗ್ತಿದ್ರು.. ಈ ಕುತೂಹಲದ ಪ್ರಶ್ನೆಗೆ ವಿರಾಟ್ ಹೇಳಿದ್ದೇನು?
ಇದನ್ನೂ ಓದಿ: T20 ವಿಶ್ವಕಪ್ ಆರಂಭಕ್ಕೂ ಮೊದಲೇ ವಿಘ್ನ.. ಕ್ಯಾಪ್ಟನ್ ರೋಹಿತ್ ಶರ್ಮಾ ಇಂಜುರಿಗೆ ಒಳಗಾದ್ರಾ?
ಇನ್ನು ಪಂಜಾಬ್ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಹರ್ಷಲ್ ಪಟೇಲ್ 3 ವಿಕೆಟ್ಗಳನ್ನ ಪಡೆದುಕೊಂಡು ಮಿಂಚಿದರು. ಧೋನಿಯನ್ನು ಡಕೌಟ್ ಮಾಡುವ ಮೂಲಕ ಸಂಭ್ರಮಿಸಿದರು. ರಾಹುಲ್ ಚಹಾರ್ 3 ವಿಕೆಟ್ ಹಾಗೂ ಆರ್ಶ್ದೀಪ್ 2 ವಿಕೆಟ್ ಪಡೆದು ಚೆನ್ನೈಯನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯ
CSKಯ ಇಬ್ಬರನ್ನು ಡಕೌಟ್ ಮಾಡಿದ ಪಂಜಾಬ್ ಬೌಲರ್ಸ್
ಪಂಜಾಬ್ ಪರ ಭರ್ಜರಿ ಬೌಲಿಂಗ್ ಮಾಡಿದ ಹರ್ಷಲ್, ರಾಹುಲ್
ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 168 ರನ್ಗಳ ಟಾರ್ಗೆಟ್ ನೀಡಿದೆ.
ಪಂದ್ಯ ಆರಂಭಕ್ಕೂ ಮೊದಲು ಟಾಸ್ ಗೆದ್ದು ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಚೆನ್ನೈ ಪರ ಆರಂಭೀಕರಾಗಿ ಬ್ಯಾಟಿಂಗ್ ಮಾಡಲು ಬಂದ ಅಜಿಂಕ್ಯಾ ರಹಾನೆ, ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಆಘಾತಕ್ಕೆ ಒಳಗಾದರು. ತಂಡದ ಮೊತ್ತ ಕೇವಲ 12 ರನ್ ಇರುವಾಗಲೇ ರಹಾನೆ ರಬಾಡಾಗೆ ಕ್ಯಾಚ್ ಕೊಟ್ಟು ಔಟ್ ಆದರು. ಇದಾದ ಬಳಿಕ ರುತುರಾಜ್ ಗಾಯಕ್ವಾಡ್ ಕೂಡ 32 ರನ್ಗೆ ಪೆವಿಲಿಯನ್ ನಡೆಸಿದರು. ನಂತರ ಬಂದ ಮಿಚೆಲ್ ಸ್ವಲ್ಪ ಹೊತ್ತು ಕ್ರೀಸ್ ಕಾಯ್ದುಕೊಂಡು 30 ರನ್ ಗಳಿಸಿ ಎಲ್ಬಿ ಬಲೆಗೆ ಬಿದ್ದರು. ಇನ್ನು ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಮಾಡಿ 43 ರನ್ ಗಳಿಸಿ ತಂಡಕ್ಕೆ ಆಸರೆ ಆದರು. ಇವರನ್ನು ಬಿಟ್ಟರೇ ಧೋನಿ ಸೇರಿ ಉಳಿದ ಬ್ಯಾಟ್ಸ್ಮನ್ಗಳೆಲ್ಲ 20 ರನ್ ಗಳಿಸಿದಕ್ಕೂ ಮೊದಲೇ ಪೆವಿಲಿಯನ್ ಪೆರೇಡ್ ನಡೆಸಿದರು.
ಇದನ್ನೂ ಓದಿ: ಕೊಹ್ಲಿ ಕ್ರಿಕೆಟರ್ ಆಗದಿದ್ರೆ, ಏನಾಗ್ತಿದ್ರು.. ಈ ಕುತೂಹಲದ ಪ್ರಶ್ನೆಗೆ ವಿರಾಟ್ ಹೇಳಿದ್ದೇನು?
ಇದನ್ನೂ ಓದಿ: T20 ವಿಶ್ವಕಪ್ ಆರಂಭಕ್ಕೂ ಮೊದಲೇ ವಿಘ್ನ.. ಕ್ಯಾಪ್ಟನ್ ರೋಹಿತ್ ಶರ್ಮಾ ಇಂಜುರಿಗೆ ಒಳಗಾದ್ರಾ?
ಇನ್ನು ಪಂಜಾಬ್ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಹರ್ಷಲ್ ಪಟೇಲ್ 3 ವಿಕೆಟ್ಗಳನ್ನ ಪಡೆದುಕೊಂಡು ಮಿಂಚಿದರು. ಧೋನಿಯನ್ನು ಡಕೌಟ್ ಮಾಡುವ ಮೂಲಕ ಸಂಭ್ರಮಿಸಿದರು. ರಾಹುಲ್ ಚಹಾರ್ 3 ವಿಕೆಟ್ ಹಾಗೂ ಆರ್ಶ್ದೀಪ್ 2 ವಿಕೆಟ್ ಪಡೆದು ಚೆನ್ನೈಯನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ