ಆರು ವರ್ಷದ ಬಾಲಕಿ ಮೇಲೆ ಚಿರತೆ ದಾಳಿ
ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮ
ಪಾದಚಾರಿಗಳು ಗುಂಪಿನಲ್ಲಿ ಹೋಗಬೇಕು ಎಂದು ಸೂಚನೆ
ಇನ್ಮುಂದೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ. ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಟಿಡಿಪಿ ಮಹತ್ವದ ಸೂಚನೆ
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೊಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆರು ವರ್ಷದ ಬಾಲಕಿ ಮೇಲೆ ಚಿರತೆ ದಾಳಿ
ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮ
ಪಾದಚಾರಿಗಳು ಗುಂಪಿನಲ್ಲಿ ಹೋಗಬೇಕು ಎಂದು ಸೂಚನೆ
ಇನ್ಮುಂದೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ. ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಟಿಡಿಪಿ ಮಹತ್ವದ ಸೂಚನೆ
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೊಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ