ಆಂಧ್ರಪ್ರದೇಶದ ಬಾಪಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ
ತನ್ನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದ ಬಾಲಕ (15)
ಪ್ರಶ್ನಿಸಿದ್ದಕ್ಕೆ ಬಾಲಕನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಹಂತಕರು..!
ಬಾಪಟ್ಲ: 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೋರ್ವನನ್ನು ಹಂತಕರು ಜೀವಂತವಾಗಿ ಸುಟ್ಟು ಹಾಕಿದ್ದಾರೆ. 21 ವರ್ಷದ ವೆಂಕಟೇಶ್ವರ್ ಎಂಬ ಕಿಡಿಗೇಡಿ ಸೇರಿ ಮೂವರು ಹಂತಕರು ಅಮರ್ನಾಥ್ (15) ಎಂಬ ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದು, ಈ ಕೃತ್ಯ ಇಡೀ ಆಂಧ್ರಪ್ರದೇಶವನ್ನೇ ಬೆಚ್ಚಿಬೀಳಿಸಿದೆ.
ವೆಂಕಟೇಶ್ವರ್ (21) ಎಂಬ ಹಂತಕ ಅಮರ್ನಾಥ್ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದ. ಇದನ್ನು ಅಮರ್ನಾಥ್ ಪ್ರಶ್ನಿಸಿದ್ದಕ್ಕೆ ವೆಂಕಟೇಶ್ವರ್ ಮತ್ತಾತನ ಸ್ನೇಹಿತರು ಸೇರಿ ಈ ಕೃತ್ಯ ಎಸಗಿದ್ದಾರೆ. ಅಮರ್ನಾಥ್ ಟ್ಯೂಷನ್ಗೆ ಹೋಗು ಬರುವಾಗ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದಾರೆ.
ಇನ್ನು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಧ್ಯೆ ಆರೋಪಿಗಳ ಬಗ್ಗೆ ಬಾಯಿಬಿಟ್ಟ ಅಮರ್ನಾಥ್ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಆಂಧ್ರಪ್ರದೇಶದ ಬಾಪಟ್ಲ ಎಂಬ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.
ಆರೋಪಿಗಳ ವಿರುದ್ಧ 2 ಕೇಸ್..!
ಈ ಸಂಬಂಧ ಮಾತಾಡಿದ ಹಿರಿಯ ಪೊಲೀಸ್ ಅಧಿಕಾರಿ ವಾಕುಲ್ ಜಿಂದಾಲ್, ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ. ವೆಂಕಟೇಶ್ವರ್ ವಿರುದ್ಧ ಕೊಲೆ ಕೇಸ್ ಜತೆಗೆ ಪೋಕ್ಸೋ ಕೂಡ ದಾಖಲು ಮಾಡಿದ್ದೇವೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಆಂಧ್ರಪ್ರದೇಶದ ಬಾಪಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ
ತನ್ನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದ ಬಾಲಕ (15)
ಪ್ರಶ್ನಿಸಿದ್ದಕ್ಕೆ ಬಾಲಕನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಹಂತಕರು..!
ಬಾಪಟ್ಲ: 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೋರ್ವನನ್ನು ಹಂತಕರು ಜೀವಂತವಾಗಿ ಸುಟ್ಟು ಹಾಕಿದ್ದಾರೆ. 21 ವರ್ಷದ ವೆಂಕಟೇಶ್ವರ್ ಎಂಬ ಕಿಡಿಗೇಡಿ ಸೇರಿ ಮೂವರು ಹಂತಕರು ಅಮರ್ನಾಥ್ (15) ಎಂಬ ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದು, ಈ ಕೃತ್ಯ ಇಡೀ ಆಂಧ್ರಪ್ರದೇಶವನ್ನೇ ಬೆಚ್ಚಿಬೀಳಿಸಿದೆ.
ವೆಂಕಟೇಶ್ವರ್ (21) ಎಂಬ ಹಂತಕ ಅಮರ್ನಾಥ್ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದ. ಇದನ್ನು ಅಮರ್ನಾಥ್ ಪ್ರಶ್ನಿಸಿದ್ದಕ್ಕೆ ವೆಂಕಟೇಶ್ವರ್ ಮತ್ತಾತನ ಸ್ನೇಹಿತರು ಸೇರಿ ಈ ಕೃತ್ಯ ಎಸಗಿದ್ದಾರೆ. ಅಮರ್ನಾಥ್ ಟ್ಯೂಷನ್ಗೆ ಹೋಗು ಬರುವಾಗ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದಾರೆ.
ಇನ್ನು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಧ್ಯೆ ಆರೋಪಿಗಳ ಬಗ್ಗೆ ಬಾಯಿಬಿಟ್ಟ ಅಮರ್ನಾಥ್ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಆಂಧ್ರಪ್ರದೇಶದ ಬಾಪಟ್ಲ ಎಂಬ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.
ಆರೋಪಿಗಳ ವಿರುದ್ಧ 2 ಕೇಸ್..!
ಈ ಸಂಬಂಧ ಮಾತಾಡಿದ ಹಿರಿಯ ಪೊಲೀಸ್ ಅಧಿಕಾರಿ ವಾಕುಲ್ ಜಿಂದಾಲ್, ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ. ವೆಂಕಟೇಶ್ವರ್ ವಿರುದ್ಧ ಕೊಲೆ ಕೇಸ್ ಜತೆಗೆ ಪೋಕ್ಸೋ ಕೂಡ ದಾಖಲು ಮಾಡಿದ್ದೇವೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ