ಕನ್ನಡಿಗರ ಮೀಸಲಾತಿ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದ ಫೋನ್ ಪೇ ಸಿಇಒ
ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ ಸಿಇಒ ಸಮೀರ್ ನಿಗಮ್!
ಫೋನ್ ಪೇ ಬೈಕಾಟ್ ಬೆನ್ನಲ್ಲೇ ಹೆದರಿ ಸಮೀರ್ ನಿಗಮ್ ಕ್ಷಮೆ ಕೇಳಿದ್ದೇಕೆ?
ಬೆಂಗಳೂರು: ಖಾಸಗಿ ಕಂಪನಿಯಲ್ಲಿ ಕನ್ನಡಿಗರ ಮೀಸಲಾತಿ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಮುಂದೆ ಮಂಡಿಯೂರಿದ್ದಾರೆ. ಬಾಯ್ಕಾಟ್ ಫೋನ್ ಪೇ ಎಂಬ ಅಭಿಯಾನ ಶುರು ಆಗುತ್ತಿದ್ದಂತೆಯೇ ಹೆದರಿದ ಸಮೀರ್ ನಿಗಮ್ ಕನ್ನಡಿಗರ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ.
ಕರ್ನಾಟಕ ಮತ್ತು ಕನ್ನಡಿಗರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದ್ರೂ ನೋವಾಗಿದ್ರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆ ಉಂಟಾಗಿದ್ರೆ ಕ್ಷಮೆ ಕೇಳುತ್ತೇನೆ. ಫೋನ್ ಪೇ ಬೆಳವಣಿಗೆಗೆ ಬೆಂಗಳೂರು ಕೊಡುಗೆ ಅಪಾರವಾಗಿದೆ ಎಂದಿದ್ದಾರೆ ಸಮೀರ್.
ಈ ಹಿಂದೆ ಸಮೀರ್ ನಿಗಮ್ ಏನಂದಿದ್ರು..?
ನನಗೆ ಈಗ 46 ವರ್ಷ. 15 ವರ್ಷಕ್ಕಿಂತ ಹೆಚ್ಚು ಕಾಲ ಯಾವ ರಾಜ್ಯಗಳಲ್ಲೂ ಇರಲಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರು ದೇಶದಾದ್ಯಂತ ವಿವಿಧ ಸ್ಥಳಗಳಲ್ಲಿ ಕೆಲಸಕ್ಕಾಗಿ ಇರುತ್ತಿದ್ದರು. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಒಂದು ಸಂಸ್ಥೆಯನ್ನು ಕಟ್ಟಿದ್ದೇನೆ. ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಜನರಿಗೆ ಕೆಲಸ ಕೊಟ್ಟಿದ್ದೇನೆ. ನನ್ನ ಮಕ್ಕಳು ಬೆಂಗಳೂರಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಇದು ನಾಚಿಕೆಗೇಡು ಎಂದು ಸಮೀರ್ ನಿಗಮ್ ಕನ್ನಡಿಗರಿಗೆ ಮೀಸಲಾತಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು.
ಇದನ್ನೂ ಓದಿ: BREAKING: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಫೋನ್ ಪೇ CEO ಸಮೀರ್ ನಿಗಮ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಕನ್ನಡಿಗರ ಮೀಸಲಾತಿ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದ ಫೋನ್ ಪೇ ಸಿಇಒ
ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ ಸಿಇಒ ಸಮೀರ್ ನಿಗಮ್!
ಫೋನ್ ಪೇ ಬೈಕಾಟ್ ಬೆನ್ನಲ್ಲೇ ಹೆದರಿ ಸಮೀರ್ ನಿಗಮ್ ಕ್ಷಮೆ ಕೇಳಿದ್ದೇಕೆ?
ಬೆಂಗಳೂರು: ಖಾಸಗಿ ಕಂಪನಿಯಲ್ಲಿ ಕನ್ನಡಿಗರ ಮೀಸಲಾತಿ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಮುಂದೆ ಮಂಡಿಯೂರಿದ್ದಾರೆ. ಬಾಯ್ಕಾಟ್ ಫೋನ್ ಪೇ ಎಂಬ ಅಭಿಯಾನ ಶುರು ಆಗುತ್ತಿದ್ದಂತೆಯೇ ಹೆದರಿದ ಸಮೀರ್ ನಿಗಮ್ ಕನ್ನಡಿಗರ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ.
ಕರ್ನಾಟಕ ಮತ್ತು ಕನ್ನಡಿಗರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದ್ರೂ ನೋವಾಗಿದ್ರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆ ಉಂಟಾಗಿದ್ರೆ ಕ್ಷಮೆ ಕೇಳುತ್ತೇನೆ. ಫೋನ್ ಪೇ ಬೆಳವಣಿಗೆಗೆ ಬೆಂಗಳೂರು ಕೊಡುಗೆ ಅಪಾರವಾಗಿದೆ ಎಂದಿದ್ದಾರೆ ಸಮೀರ್.
ಈ ಹಿಂದೆ ಸಮೀರ್ ನಿಗಮ್ ಏನಂದಿದ್ರು..?
ನನಗೆ ಈಗ 46 ವರ್ಷ. 15 ವರ್ಷಕ್ಕಿಂತ ಹೆಚ್ಚು ಕಾಲ ಯಾವ ರಾಜ್ಯಗಳಲ್ಲೂ ಇರಲಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರು ದೇಶದಾದ್ಯಂತ ವಿವಿಧ ಸ್ಥಳಗಳಲ್ಲಿ ಕೆಲಸಕ್ಕಾಗಿ ಇರುತ್ತಿದ್ದರು. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಒಂದು ಸಂಸ್ಥೆಯನ್ನು ಕಟ್ಟಿದ್ದೇನೆ. ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಜನರಿಗೆ ಕೆಲಸ ಕೊಟ್ಟಿದ್ದೇನೆ. ನನ್ನ ಮಕ್ಕಳು ಬೆಂಗಳೂರಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಇದು ನಾಚಿಕೆಗೇಡು ಎಂದು ಸಮೀರ್ ನಿಗಮ್ ಕನ್ನಡಿಗರಿಗೆ ಮೀಸಲಾತಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು.
ಇದನ್ನೂ ಓದಿ: BREAKING: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಫೋನ್ ಪೇ CEO ಸಮೀರ್ ನಿಗಮ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್