/newsfirstlive-kannada/media/post_attachments/wp-content/uploads/2024/10/MOD-GIFT.jpg)
ದೇಶದಲ್ಲಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾ ದೇವಿಯ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸಖ್ತೀರಾದ ಶ್ಯಾಮನಗರದಲ್ಲಿರುವ (Shyamnagar) ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ (jeshoreshwari kali temple) ಚಿನ್ನದ ಕಿರೀಟ ಕಳ್ಳತನವಾಗಿದೆ.
51 ಶಕ್ತಿ ಪೀಠಗಳಲ್ಲಿ ಈ ದೇಗುಲ ಕೂಡ ಒಂದಾಗಿದೆ. ಕಳ್ಳತನವಾಗಿರುವ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಅದರಲ್ಲಿ ಯುವಕನೊಬ್ಬ ಚಿನ್ನದ ಕಿರೀಟವನ್ನು ತೆಗೆದುಕೊಂಡು ಹೋಗ್ತಿರುವ ದೃಶ್ಯ ಬಹಿರಂಗಗೊಂಡಿವೆ. ಚಿನ್ನದ ಕಿರೀಟವನ್ನು ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯಾಗಿ ನೀಡಿದ್ದರು.
ಇದನ್ನೂ ಓದಿ:ನವರಾತ್ರಿಯಂದು ಅಹ್ಮದಾಬಾದ್ನಲ್ಲಿ ಪುರುಷರು ಸ್ತ್ರೀ ವೇಷ ಹಾಕುವುದೇಕೆ; ಇದರ ಹಿಂದೆ ಇದೆ ಒಂದು ದುರಂತ ಇತಿಹಾಸ
ಬಾಂಗ್ಲಾದೇಶದ ಈ ಕಾಳಿ ದೇವಸ್ಥಾನದ ಕಿರೀಟಕ್ಕೂ ಪ್ರಧಾನಿ ಮೋದಿಗೂ ವಿಶೇಷ ಸಂಬಂಧ ಇದೆ. 2021ರಲ್ಲಿ ಮೋದಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಇದೀಗ ಅದೇ ಚಿನ್ನದ ಕಿರೀಟ ಕಳ್ಳತನವಾಗಿದೆ.
ಗುರುವಾರ ಮಧ್ಯಾಹ್ನ 2:47 ರಿಂದ 2:50 ರ ನಡುವೆ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಅರ್ಚಕ ದಿಲೀಪ್ ಕುಮಾರ್ ಬ್ಯಾನರ್ಜಿ ದೈನಂದಿನ ಪೂಜೆಯನ್ನು ಪೂರ್ಣಗೊಳಿಸಿದ ನಂತರ, ದೇವಾಲಯದ ಬೀಗಗಳನ್ನು ನಿರ್ವಹಣೆ ಮಾಡುವ ವ್ಯಕ್ತಿಗೆ ನೀಡಿದ್ದರು.
ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿ ರೇಖಾ ಸರ್ಕಾರ್, ಬೇರೆ ಕೆಲಸದಲ್ಲಿ ಬ್ಯುಸಿಯಿದ್ದ. ಈ ವೇಳೆ ಕಾಳಿ ಮಾತೆಯ ಚಿನ್ನದ ಕಿರೀಟ ಕಾಣೆಯಾಗಿದೆ.
ರೇಖಾ ಸರ್ಕಾರ್ ವಾಪಸ್ ಬಂದು ನೋಡಿದಾಗ ಕಾಳಿ ಮಾತೆಯ ಚಿನ್ನದ ಕಿರೀಟ ಕಾಣೆಯಾಗಿದೆ. ಈ ವಿಷಯವನ್ನು ಕುಡಲೇ ಎಲ್ಲರಿಗೂ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಎಲ್ಲೆಲ್ಲೂ ದಸರಾ ಸಂಭ್ರಮ, ಸಡಗರ.. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ..! ಇದರ ಮಹತ್ವ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ