/newsfirstlive-kannada/media/post_attachments/wp-content/uploads/2025/04/SANJAY-RAVATH.jpg)
ಮುಂದಿನ ಸೆಪ್ಟೆಂಬರ್​​ನಲ್ಲಿ ಪ್ರಧಾನಿ ಮೋದಿ ಅವರು ನಿವೃತ್ತಿ ಆಗಲಿದ್ದಾರೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ.
ಆರ್​ಎಸ್​ಎಸ್ ಕಚೇರಿಗೆ ಮೋದಿ ಭೇಟಿ ನೀಡಿದ್ದನ್ನು ಲೇವಡಿ ಮಾಡಿರುವ ಅವರು, ತಮ್ಮ ನಿವೃತ್ತಿ ಅರ್ಜಿ ಬರೆಯಲು ಮೋದಿ ಆರ್​ಎಸ್​ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಸಂಘವು ನಾಯಕನನ್ನು ಬದಲಿಸಲು ಹೊರಟಿದೆ. ದೇಶದ ರಾಜಕೀಯ ನಾಯಕತ್ವ ಬದಲಿಸಲು ಆರ್ಎಸ್ಎಸ್ ನಿರ್ಧರಿಸಿದೆ. ಸೆಪ್ಟೆಂಬರ್ನಲ್ಲಿ ನಡೆಯಲಿರುವ ತಮ್ಮ ನಿವೃತ್ತಿಯ ಅರ್ಜಿ ಬರೆಯಲೆಂದೇ ಮೋದಿ ಆರ್ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು ಎಂದಿದ್ದಾರೆ.
ಇದನ್ನೂ ಓದಿ: ನಟಿ ರನ್ಯಾ ರಾವ್ ಗೋಲ್ಡ್ ಕೇಸ್ಗೆ ಹೊಸ ಟ್ವಿಸ್ಟ್.. ಸರ್ಕಾರಕ್ಕೆ 230 ಪುಟಗಳ ತನಿಖಾ ವರದಿ ಸಲ್ಲಿಕೆ
/newsfirstlive-kannada/media/post_attachments/wp-content/uploads/2025/04/MODI.jpg)
ನಿಮಗೀಗ 75 ವರ್ಷ ಎಂದು ನೆನಪಿಸಲು ಮೋದಿಯನ್ನು ಆರ್ಎಸ್ಎಸ್ ಕರೆಸಿಕೊಂಡಿತ್ತು. ಮೋದಿಯವರ ಉತ್ತರಾಧಿಕಾರಿ ಯಾರು ಅಂತಾ ಆರ್ಎಸ್ಎಸ್ ನಿರ್ಧರಿಸುತ್ತದೆ. ಅದಕ್ಕಾಗಿಯೇ ಮೋದಿಯನ್ನು ಆರ್ಎಸ್ಎಸ್ ಕೇಂದ್ರ ಕಚೇರಿಗೆ ಕರೆಸಿ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.
/newsfirstlive-kannada/media/post_attachments/wp-content/uploads/2025/04/SANJAY.jpg)
ರಾವತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ದೇವೇಂದ್ರ ಫಡ್ನವೀಸ್, 2029ಕ್ಕೂ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ. ಮಾರ್ಚ್​ 30 ರಂದು ಪ್ರಧಾನಿ ಮೋದಿ ನಾಗ್ಪುರ ಆರ್​ಎಸ್​ಎಸ್​ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು.
ಇದನ್ನೂ ಓದಿ: ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ, ಡಿಕೆಶಿ ದಿಢೀರ್ ಮೀಟಿಂಗ್; ಏನಾಯ್ತು..? ​
Dear Devendraji,
Lord Ram and Lord Krishna
Two significant figures in Hindu mythology,appeard in the world and then departed after fulfilling their roles
@Dev_Fadnavis
“Our Father...": D Fadnavis Snaps At Sanjay Raut For PM Modi 'Retirement' Talk https://t.co/DO8mTMLHsq— Sanjay Raut (@rautsanjay61) March 31, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us