HD ಕುಮಾರಸ್ವಾಮಿ ನಿಂದನೆ; ಸಚಿವ ಜಮೀರ್​ ಅಹ್ಮದ್​ ಖಾನ್​ ವಿರುದ್ಧ ಪೊಲೀಸ್​ ಕಂಪ್ಲೈಂಟ್​​

author-image
Ganesh Nachikethu
Updated On
HD ಕುಮಾರಸ್ವಾಮಿ ನಿಂದನೆ; ಸಚಿವ ಜಮೀರ್​ ಅಹ್ಮದ್​ ಖಾನ್​ ವಿರುದ್ಧ ಪೊಲೀಸ್​ ಕಂಪ್ಲೈಂಟ್​​
Advertisment
  • ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವು
  • ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಿವಾದಿತ ಹೇಳಿಕೆ..!
  • ಇಂದು ಮಿನಿಸ್ಟರ್​ ಜಮೀರ್​ ಅಹ್ಮದ್​ ಖಾನ್​ ವಿರುದ್ಧ ದೂರು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದೆ. ಇತ್ತೀಚೆಗೆ ನಡೆದ ಬಹಿರಂಗ ಸಭೆಯಲ್ಲಿ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು, ಸಿ.ಪಿ ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಶುರು ಮಾಡಿದ್ರು. ಬಳಿಕ ಜೆಡಿಎಸ್‌ಗೆ ಹೋಗಬೇಕು ಎಂದುಕೊಂಡಿದ್ದರು. ಆದರೆ, ಹೆಚ್​​​.ಡಿ ಕುಮಾರಸ್ವಾಮಿ ಬಿಜೆಪಿಗಿಂತಲೂ ಡೇಂಜರ್​ ಎಂದಿದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ರು.

ಏಯ್​​ ಕುಮಾರಸ್ವಾಮಿ ನಿನಗೆ ಮುಸಲ್ಮಾನರ ಮತ ಬೇಕಾ? ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತೀಯಾ? ನಿನ್ನ ರೇಟು ಹೇಳು. ಮುಸಲ್ಮಾನರೇ ಒಂದೊಂದು ಪೈಸೆ ಹಾಕಿ ನಿನ್ನಿಡೀ ಕುಟಂಬವನ್ನೇ ಖರೀದಿ ಮಾಡುತ್ತಾರೆ ಎಂದು ಏಕವಚನದಲ್ಲೇ ದಾಳಿ ನಡೆಸಿದ್ರು ಜಮೀರ್​​. ಎಚ್‌.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದ ಜಮೀರ್​​ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಜಮೀರ್​ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ಜಮೀರ್​ ವಿರುದ್ಧ ದೂರು

ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು ಜಮೀರ್​​. ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ ಡೇಂಜರ್​ ಅನ್ನೋ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್​ ವಿರುದ್ಧ ದೂರು ನೀಡಲಾಗಿದೆ. ವಕೀಲ RLN ಮೂರ್ತಿ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಜಮೀರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜಾತಿ, ಧರ್ಮಗಳ ಮಧ್ಯೆ ದ್ವೇಷ ಭಾವನೆ ಬಿತ್ತುವ ಪ್ರಯತ್ನ ಜಮೀರ್​ ಅವರದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ:VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment