/newsfirstlive-kannada/media/post_attachments/wp-content/uploads/2024/12/laxmi8.jpg)
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಓರ್ವ ಅಧಿಕಾರಿಯ ತಲೆದಂಡವಾಗಿದೆ.
ಕರ್ತವ್ಯಲೋಪದಡಿ ಖಾನಾಪುರ ಪೋಲಿಸ್ ಇನ್ಸ್​​ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತುಗೋಳಿಸಿ ಆದೇಶ ಹೊರಬಿದ್ದಿದೆ. ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್​ ಕುಮಾರ್​ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿ ಖಾನಾಪುರ ಠಾಣೆಗೆ ಕರೆತಂದ ಕರ್ತವ್ಯ ಲೋಪ, ನಿಷ್ಕಾಳಜಿತನ, ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಅಪಾಧಿತರನ್ನು ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ ನೀಡಿದ್ದರೂ ನಿರ್ಲಕ್ಷ್ಯ ವಹಿಸಿದ ಆರೋಪ ಇದೆ. ಈ ಅವಧಿಯಲ್ಲಿ ಬಿಜೆಪಿ ನಾಯಕರು ಸೇರಿ ಎಲ್ಲರನ್ನೂ ಠಾಣೆ ಒಳಗಡೆ ಬಿಟ್ಟಿದ್ದರು. ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಆರೋಪದಡಿ ಇನ್ಸ್​​ಪೆಕ್ಟರ್​ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ:ಸಂಚಲನ ಸೃಷ್ಟಿಸಿದ ಶಮಿ-ಸಾನಿಯಾ AI ಫೋಟೋ; ನಕಲಿ ಚಿತ್ರ ಪತ್ತೆ ಮಾಡೋದು ಹೇಗೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us