Advertisment

ದರ್ಶನ್​ ಕೇಸ್​ಗೆ ಬಿಗ್ ಟ್ವಿಸ್ಟ್​; 3991 ಪುಟಗಳ ಜಾರ್ಜ್​ಶೀಟ್ ಇಂದೇ ಸಲ್ಲಿಕೆ..!

author-image
Ganesh
Updated On
ದರ್ಶನ್​​ಗೆ ಜಾಮೀನು ಬೆನ್ನಲ್ಲೇ ಮತ್ತೊಂದು ಗುಡ್​​ನ್ಯೂಸ್.. ಕೋರ್ಟ್​​ನಿಂದ ಸಿಹಿ ಸುದ್ದಿ
Advertisment
  • 24ನೇ ACMM ಕೋರ್ಟ್​ಗೆ ದೋಷಾರೋಪಣಾ ಪಟ್ಟಿ ಸಲ್ಲಿಕೆ
  • ರೇಣುಕಾಸ್ವಾಮಿ ಪ್ರಕರಣದಲ್ಲಿ 17 ಆರೋಪಿಗಳ ಬಂಧನ ಆಗಿದೆ
  • ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷ್ಯಗಳ ಸಂಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪ್ರಕರಣದ ಬಗ್ಗೆ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಲಿದ್ದಾರೆ.

Advertisment

ಪೊಲೀಸ್​ ಪ್ರಕಟಣೆ..!
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳ ವಿರುದ್ಧ 24ನೇ ಎ.ಸಿ.ಎಂ.ಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗುತ್ತಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳಿಂದ 17 ಆರೋಪಿತರ ವಿರುದ್ಧ ಮಾನ್ಯ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗುತ್ತಿದೆ. ಈ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ.

ಈ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ, ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಸತೀಶ್‌ ಕುಮಾರ್ ಎನ್ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್ ನೇತೃತ್ವದಲ್ಲಿ, ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದೆ. ಜೊತೆಗೆ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.

Advertisment

ಇದನ್ನೂ ಓದಿ:ದುಬಾರಿಯಾದ ಚಾರ್ಜ್​ಶೀಟ್​​! ಪೊಲೀಸ್​ ಇಲಾಖೆಗೆ ದರ್ಶನ್​ ತನಿಖೆಗೆ ಎಷ್ಟು ಲಕ್ಷ ಖರ್ಚು ಮಾಡಿದೆ ಗೊತ್ತಾ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment