Advertisment

625 ಕೋಟಿ ರೂ. ದುರ್ಬಳಕೆ ಆರೋಪ.. ಸಚಿವ ಜಮೀರ್‌ಗೆ ‘ಲೋಕಾ’ ಸಂಕಷ್ಟ..!

ರಾಜ್ಯ ಸರ್ಕಾರದ ಮತ್ತೋರ್ವ ಸಚಿವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಬರೋಬ್ಬರಿ 625 ಕೋಟಿ ರೂ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ.

author-image
Ganesh Kerekuli
VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?
Advertisment

ಬೆಂಗಳೂರು: ರಾಜ್ಯ ಸರ್ಕಾರದ ಮತ್ತೋರ್ವ ಸಚಿವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಬರೋಬ್ಬರಿ 625 ಕೋಟಿ ರೂಪಾಯಿಗಳ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ.

Advertisment

ಏನಿದು ಆರೋಪ?

ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ ಮೀಸಲಾಗಿದ್ದ ಕೋಟ್ಯಂತರ ರೂಪಾಯಿ ಹಣವನ್ನು ನಿಯಮಬಾಹಿರವಾಗಿ ಬಳಸಲಾಗಿದೆ ಎಂಬುದು ಸಚಿವ ಜಮೀರ್ ಮೇಲಿರುವ ಪ್ರಮುಖ ಆರೋಪ. ಸರ್ಕಾರದ ಆರ್ಥಿಕ ಇಲಾಖೆಯ (Finance Department) ಯಾವುದೇ ಪೂರ್ವಾನುಮತಿ ಪಡೆಯದೆ, ಗುತ್ತಿಗೆದಾರರ ಜೊತೆ ಶಾಮೀಲಾಗಿ ಈ ಬೃಹತ್ ಮೊತ್ತದ (625 ಕೋಟಿ ರೂ.) ಕಾಮಗಾರಿಗಳನ್ನು ಹಂಚಿಕೆ ಮಾಡಿ, ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಲಾಗಿದೆ.

ಲೋಕಾಯುಕ್ತ ಮೆಟ್ಟಿಲೇರಿದ್ದ ಜೆಡಿಎಸ್

ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವ ಈ ಬೃಹತ್ ಹಗರಣದ ಕುರಿತು ಜೆಡಿಎಸ್ (JDS) ವಕ್ತಾರರಾದ ಪ್ರದೀಪ್ ಕುಮಾರ್ ಅವರು ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ಅಧಿಕೃತವಾಗಿ ದೂರು ಸಲ್ಲಿಕೆ ಮಾಡಿದ್ದರು. ಸಚಿವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ದೂರು ಸ್ವೀಕರಿಸಿರುವ ಲೋಕಾಯುಕ್ತರು, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ. ತಮ್ಮ ಮೇಲಿನ ಹಣ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಮಗ್ರ ವಿವರಣೆ ನೀಡುವಂತೆ ಸೂಚಿಸಲಾಗಿದೆ. ತಮ್ಮ ಉತ್ತರವನ್ನು ಎರಡು ಪ್ರತಿಗಳಲ್ಲಿ (Two copies) ಸಲ್ಲಿಸುವಂತೆ ಲೋಕಾಯುಕ್ತರು ನೋಟಿಸ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

Advertisment

ಟೈಂ ಕೇಳಿದ ಜಮೀರ್ ವಕೀಲರು

ಲೋಕಾಯುಕ್ತ ನೋಟಿಸ್ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಚಿವ ಜಮೀರ್ ಅಹ್ಮದ್, ತಮ್ಮ ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ. ದೂರಿನಲ್ಲಿರುವ ಆರೋಪಗಳಿಗೆ ಸಂಬಂಧಿಸಿದಂತೆ ವಿವರವಾದ ಉತ್ತರ ಹಾಗೂ ದಾಖಲೆಗಳನ್ನು ಒದಗಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಜಮೀರ್ ಪರ ವಕೀಲರು ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆಟಗಾರ ರಿಂಕು ಸಿಂಗ್‌ಗೆ ಪಿತೃಶೋಕ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

ಅಲ್ಪಸಂಖ್ಯಾತ ಇಲಾಖೆಯಲ್ಲಿ ನಡೆದಿರುವ ಈ ಬರೋಬ್ಬರಿ 625 ಕೋಟಿ ರೂಪಾಯಿಗಳ ದುರ್ಬಳಕೆ ಹಗರಣದ ಬಗ್ಗೆ 'ನ್ಯೂಸ್ ಫಸ್ಟ್' (News First) ಈ ಹಿಂದೆಯೇ ಎಕ್ಸ್‌ಕ್ಲೂಸಿವ್ ಆಗಿ ವರದಿ ಮಾಡಿ, ಸರ್ಕಾರದ ಗಮನ ಸೆಳೆದಿತ್ತು. ಇದೀಗ ಅದೇ ವರದಿಯ ಎಳೆ ಹಿಡಿದು ದೂರು ದಾಖಲಾಗಿದ್ದು, ಸಚಿವರಿಗೆ ಲೋಕಾಯುಕ್ತ ನೋಟಿಸ್ ಜಾರಿಯಾಗುವ ಮೂಲಕ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Minister zameer ahmed khan Zameer Ahmed Khan
Advertisment
Advertisment
Advertisment