Advertisment

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಹೈವೋಲ್ಟೇಜ್‌ ಭೋಜನಕೂಟ ಆರಂಭ: ಕ್ಯಾಬಿನೆಟ್ ಪುನರ್ ರಚನೆಯ ಸುಳಿವು ಕೊಡುತ್ತಾರಾ ಸಿಎಂ?

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿರುವ ಭೋಜನಕೂಟ ಆರಂಭವಾಗಿದೆ. ಭೋಜನಕೂಟಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ. ಈ ಭೋಜನಕೂಟದಲ್ಲೇ ಕ್ಯಾಬಿನೆಟ್‌ ಪುನರ್ ರಚನೆಯ ಸುಳಿವು ಸಿಗುತ್ತಾ ಎಂಬ ಕುತೂಹಲ ಇದೆ.

author-image
Chandramohan
state cabinet meeting

ಸಿಎಂ ನಿವಾಸದಲ್ಲಿ ಭೋಜನಕೂಟ ಆರಂಭ

Advertisment
  • ಸಿಎಂ ನಿವಾಸದಲ್ಲಿ ಭೋಜನಕೂಟ ಆರಂಭ
  • ಹೈವೋಲ್ಟೇಜ್ ಭೋಜನಕೂಟದಲ್ಲಿ ಯಾವ ಸಂದೇಶ ಕೊಡುತ್ತಾರೆ ಸಿಎಂ?

ಸಿಎಂ ಸಿದ್ದರಾಮಯ್ಯ ಇಂದು ತಮ್ಮ ನಿವಾಸದಲ್ಲಿ ತಮ್ಮ ಕ್ಯಾಬಿನೆಟ್‌ನ ಸಹೋದ್ಯೋಗಿಗಳಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲೇ ಭೋಜನಕೂಟ ಏರ್ಪಡಿಸಿದ್ದಾರೆ. ಕಾವೇರಿ ನಿವಾಸಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್,  ಸಚಿವ ರಾಮಲಿಂಗಾರೆಡ್ಡಿ , ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಿದ್ದಾರೆ.
ಇನ್ನೂ ಉಳಿದ ಸಚಿವರು ಕೂಡ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಾರೆ.

Advertisment

CM RESIDENCE CAUVERY

ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸ

 ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದ ಬಳಿಕ ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಇದು ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗುತ್ತಾ ಎಂಬ ಕುತೂಹಲಕ್ಕೂ ಕಾರಣವಾಗಿದೆ. ಕ್ಯಾಬಿನೆಟ್ ನಲ್ಲಿರುವ ಕೆಲ ನಿಷ್ಕ್ರಿಯ ಸಚಿವರನ್ನು ಕೈ ಬಿಟ್ಟು ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆಯಾ ಜಾತಿಗಳಿಂದಲೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆಯಂತೆ. ಹೀಗಾಗಿ ಈ ವಿಷಯವನ್ನು ಎಲ್ಲ ಸಚಿವರಿಗೂ ಮನವರಿಕೆ ಮಾಡಿಕೊಡಲು ಭೋಜನಕೂಟ ಕರೆದಿದ್ದಾರೆ ಎಂಬ ಚರ್ಚೆಯೂ ಇದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Advertisment
Advertisment
Advertisment