/newsfirstlive-kannada/media/media_files/2025/10/17/nrn-and-cm-siddu-2025-10-17-16-37-34.jpg)
ಸಮೀಕ್ಷೆಯಲ್ಲಿ ಭಾಗಿಯಾಗದ ಎನ್ಆರ್ಎನ್ ದಂಪತಿ ಬಗ್ಗೆ ಸಿಎಂ ಪ್ರತಿಕ್ರಿಯೆ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಇನ್ಪೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಪತ್ನಿ ಸುಧಾಮೂರ್ತಿ ನಿರಾಕರಿಸಿದ್ದಾರೆ. ಈ ವಿಷಯದ ಬಗ್ಗೆ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅದು ಅವರಿಗೆ ಬಿಟ್ಟಿದ್ದು . ಇನ್ಫೋಸಿಸ್ ಅವರು ಬೃಹಸ್ಪತಿಗಳಾ? . ಇದು ಹಿಂದುಳಿದವರ ಸಮೀಕ್ಷೆ ಅಲ್ಲ . ಅವರಿಗೆ ತಪ್ಪು ಮಾಹಿತಿ ಇರಬಹುದು . ಕೇಂದ್ರ ಸರ್ಕಾರದ ಸಮೀಕ್ಷೆ ಗೆ ಏನು ಉತ್ತರ ಕೊಡ್ತಾರೆ ನೋಡೋಣ. ಇದು 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ಪೋಸಿಸ್ನ ಎನ್.ಆರ್.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೇಲ್ಜಾತಿಯವರಿಗೆ ಹಿಂದುಳಿದ ವರ್ಗಗಳ ಸಮೀಕ್ಷೆ ಬೇಕಾಗಿಲ್ಲ . ಸಿಎಂ ಸಿದ್ದರಾಮಯ್ಯ ಧೈರ್ಯ ಮಾಡಿ ಮಾಡುತ್ತಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಅಂದ್ರೆ ಸಂವಿಧಾನ ವಿರೋಧಿಗಳು, ದೇಶ ದ್ರೋಹಿಗಳು ಅಂತಾನೇ ಹೇಳಬೇಕಾಗುತ್ತೆ. ಅವರೆಲ್ಲಾ ತಂತ್ರಜ್ಞಾನ ದಿಗ್ಗಜರು ಅನಿಸಿಕೊಂಡವರು . ಸರ್ಕಾರದಿಂದ ಒಂದು ರೂಪಾಯಿಗೆ ಭೂಮಿ ಪಡೆದುಕೊಂಡಿರುತ್ತಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಕಟ್ಟೋರು ಇದ್ದಾರೆ . ತೆರಿಗೆ ಕಟ್ಟೋದರಿಂದ ತಪ್ಪಿಸಿಕೊಳ್ಳಲು ಭಾಗಿಯಾಗುತ್ತಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.