Advertisment

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂತಶ್ರೇಷ್ಠ ಕನಕದಾಸರು ಕೇವಲ ಭಕ್ತರಾಗಿದರೇ, ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ಬಯಸಿದ್ದರು ಎಂದು ಸಿಎಂ ಹೇಳಿದ್ದಾರೆ. ರಾಜ್ಯದಾದ್ಯಂತ ಇಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ.

author-image
Chandramohan
CM SIDDARAMAIAH (1)

ಬೆಂಗಳೂರಿನಲ್ಲಿ ಕನಕದಾಸ ಜಯಂತಿ ಆಚರಣೆಯಲ್ಲಿ ಸಿಎಂ ಭಾಗಿ

Advertisment
  • ಬೆಂಗಳೂರಿನಲ್ಲಿ ಕನಕದಾಸ ಜಯಂತಿ ಆಚರಣೆಯಲ್ಲಿ ಸಿಎಂ ಭಾಗಿ
  • ಕನಕದಾಸರು ವಿಶ್ವಮಾನವರು ಎಂದು ಬಣ್ಣಿಸಿದ ಸಿಎಂ ಸಿದ್ದರಾಮಯ್ಯ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು  ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

Advertisment

ಕನಕದಾಸರು ವಿಶ್ವಮಾನವರು

ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು.  ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ  ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

"ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ"  ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು. 

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ. 

Advertisment

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ  ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ  ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ  ಪಾವತಿಸಲಿದೆ. 10.25  ರಿಕವರಿ ಇದ್ದರೆ  3100 ರೂ.ಜೊತೆಗೆ 100 ರೂ.ಗಳು, ಹಾಗೂ  11.25 ರಿಕವರಿ ಇದ್ದರೆ 3200 ಜೊತೆಗೆ  100 ರೂ. ಸೇರಿದಂತೆ ಒಟ್ಟು 3300  ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಆದೇಶ ಹೊರಡಿಸಲಾಗುವುದು

ಈ ಬಗ್ಗೆ ಸರ್ಕಾರದ  ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಪ್ರತ್ಯೇಕ ಸಭೆ

ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು. 

Advertisment

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

KANAKADAS JAYANTHI CELEBRATIONS
Advertisment
Advertisment
Advertisment