/newsfirstlive-kannada/media/media_files/2025/09/20/satish_jarkiholi-2025-09-20-10-26-59.jpg)
ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ
ನಾನು ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದು ಮೈಸೂರಿನಲ್ಲಿ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ . ನೀವು ರೈಟ್ ಪರ್ಸನ್ ಗೆ ಈ ಪ್ರಶ್ನೆ ಕೇಳಿ ರೈಟ್ ಉತ್ತರ ಸಿಗುತ್ತೆ. ನಾನು ಬಹಳ ಹಿಂದೆಯೇ ರೇಸ್ ನಿಂದ ಹಿಂದೆ ಸರಿದ್ದಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ನಗುತ್ತಾ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಈ ಹಿಂದೆ ಕೂಡ ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಮುಂದಿನ ಅವಧಿಗೆ ನಾನು ಸಿಎಂ ಸ್ಥಾನಕ್ಕೇರಲು ಪ್ರಯತ್ನಿಸುತ್ತೇನೆ ಎಂದಿದ್ದರು.
ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ , ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ರಾಜ್ಯ ಹಾಗೂ ಹೈಕಮ್ಯಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದರು. ಸತೀಶ್ ಜಾರಕಿಹೊಳಿ ಸಿಎಂ ಆಗಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಬೆಂಬಲಿಸುತ್ತಿದ್ದರು.
ದಲಿತ ಸಿಎಂ ಕೂಗು ಕೇಳುತ್ತೆ . ನಾವು ಡಿನ್ನರ್ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ . ಸಿಎಂ ಡಿನ್ನರ್ ಗೆ ಕರೆದ್ರು ನಾವು ಹೋಗಿದ್ದೇವು ಅಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.