ರಾಜೀವ್ ಗೌಡನನ್ನು ಕಾಂಗ್ರೆಸ್ ನಿಂದ ಸಸ್ಪೆಂಡ್ ಮಾಡಲು ಶಿಫಾರಸ್ಸು: ಪಕ್ಷದ ಶಿಸ್ತು ಸಮಿತಿಗೆ ಶಿಫಾರಸ್ಸು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಸಸ್ಪೆಂಡ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಪಕ್ಷದ ಶಿಸ್ತು ಸಮಿತಿಗೆ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಶಿಫಾರಸ್ಸು ಮಾಡಿದ್ದಾರೆ.

author-image
Chandramohan
RAJEEV GOWDA SUSPENSION RECOMMENDATION

ರಾಜೀವ್ ಗೌಡ ಸಸ್ಪೆಂಡ್‌ಗೆ ಶಿಸ್ತು ಸಮಿತಿಗೆ ಬರೆದ ಪತ್ರ

Advertisment
  • ರಾಜೀವ್ ಗೌಡ ಸಸ್ಪೆಂಡ್‌ಗೆ ಶಿಸ್ತು ಸಮಿತಿಗೆ ಪತ್ರ ಬರೆದ ಕಾರ್ಯಾಧ್ಯಕ್ಷ
  • ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ರಿಂದ ಶಿಸ್ತು ಸಮಿತಿಗೆ ಶಿಫಾರಸ್ಸು
  • ಶಿಸ್ತು ಸಮಿತಿಯಿಂದ ಸಸ್ಪೆಂಡ್ ಆದೇಶ ಹೊರಡಿಸುವುದು ಮಾತ್ರ ಬಾಕಿ

ಮಹಿಳಾ ಅಧಿಕಾರಿ ಮೇಲೆ ದರ್ಪ ತೋರಿದ ರಾಜೀವ್ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಪಕ್ಷ ಶಿಫಾರಸ್ಸು ಮಾಡಿದೆ.  ರಾಜೀವ್ ಗೌಡನನ್ನ ಕಾಂಗ್ರೆಸ್ ನಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ. 
ಕಾಂಗ್ರೆಸ್   ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಗೆ   ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್  ಶಿಫಾರಸು ಮಾಡಿದ್ದಾರೆ.   ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿ ನಿಂದಿಸಿರುವುದು ಸಾಬೀತಾಗಿರುವ ಕಾರಣ ಅಮಾನತುಗೆ ಶಿಫಾರಸು ಮಾಡಲಾಗಿದೆ. ಜೊತೆಗೆ ರಾಜೀವ್ ಗೌಡಗೆ ಕಾಂಗ್ರೆಸ್ ಪಕ್ಷದಿಂದ ನೋಟೀಸ್ ನೀಡಲಾಗಿತ್ತು. ಆದರೇ, ನೋಟೀಸ್ ಗೆ ಇದುವರೆಗೂ ಉತ್ತರ ನೀಡಿಲ್ಲ. ಹೀಗಾಗಿ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಆದರೇ, ಅಧಿಕೃತವಾಗಿ ಪಕ್ಷದ ಶಿಸ್ತು ಸಮಿತಿಯಿಂದ ಕಾಂಗ್ರೆಸ್ ಮುಖಂಡರನ್ನು ಅಮಾನತು ಮಾಡಬೇಕಾಗುತ್ತೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿಗೆ ರಾಜೀವ್ ಗೌಡನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವಂತೆ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಶಿಫಾರಸ್ಸು ಮಾಡಿದ್ದಾರೆ. 
ಕಳೆದ‌ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಜೀವ್ ಗೌಡ, ಇತ್ತೀಚೆಗೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರನ್ನು ಪೋನ್ ನಲ್ಲಿ ನಿಂದಿಸಿ, ಜೀವ ಬೆದರಿಕೆ  ಹಾಕಿದ್ದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Congress amrutha gowda siddlghatta rajeev gowda KAS OFFICER AMRUTHA GOWDA
Advertisment