Advertisment

ರಾಜ್ಯ ಕ್ಯಾಬಿನೆಟ್ ಪುನರ್ ರಚನೆ: AICC ಅಧ್ಯಕ್ಷ ಖರ್ಗೆ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಕ್ಯಾಬಿನೆಟ್ ಪುನರ್ ರಚನೆ ಮಾಡುವುದನ್ನು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಖಚಿತಪಡಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಹೈಕಮ್ಯಾಂಡ್ ಕ್ಯಾಬಿನೆಟ್ ಪುನರ್ ರಚನೆಗೆ ಸೂಚಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈಗ ಹೈಕಮ್ಯಾಂಡ್ ಜೊತೆ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುವೆ ಎಂದಿದ್ದಾರೆ.

author-image
Chandramohan
CM SIDDARAMAIAH MEETS KHARGE

ದೆಹಲಿಯಲ್ಲಿ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ

Advertisment
  • ದೆಹಲಿಯಲ್ಲಿ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ
  • ರಾಜ್ಯ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಖರ್ಗೆ ಜೊತೆ ಮಾತುಕತೆ

ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ.  ರಾಹುಲ್ ಗಾಂಧಿ ಸೂಚನೆಯ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಾತುಕತೆ ನಡೆಸಿದ್ದಾರೆ. 

Advertisment

ನಾಲ್ಕು ತಿಂಗಳ ಹಿಂದೆಯೇ ಕಾಂಗ್ರೆಸ್ ಹೈಕಮ್ಯಾಂಡ್ ಸಂಪುಟ ಪುನರ ರಚನೆಗೆ ಸೂಚಿಸಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗಲಿ ಎಂದು ನಾನೇ ಹೇಳಿದ್ದೆ. ನವಂಬರ್ 20 ಕ್ಕೆ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗುತ್ತಿದೆ.  ಹಾಗಾಗಿ ಈಗ ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಜ್ಯದ ಕ್ಯಾಬಿನೆಟ್ ಪುನರ್ ರಚನೆಯಾಗುವುದನ್ನು ಸಿಎಂ ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ. 

cabinet re reshuffle
Advertisment
Advertisment
Advertisment