ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಎಂಎಲ್‌ಸಿಗಳ ತೀವ್ರ ಆಕ್ರೋಶ, ಅಸಮಾಧಾನ ತಣಿಸಲು ಸಿಎಂ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಇಂದು ವಿಧಾನ ಪರಿಷತ್‌ ನ ಕಾಂಗ್ರೆಸ್ ಸದಸ್ಯರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಸರ್ಕಾರದ ಸಚಿವರಗಳ ವಿರುದ್ಧ ತೀವ್ರ ಅಸಮಾಧಾನ, ಆಕ್ರೋಶ ಹೊರಹಾಕಿದ್ದಾರೆ. ಸಚಿವರು ನಮಗೆ ಸ್ಪಂದಿಸಲ್ಲ, ನಮ್ಮ ಪೋನ್ ಕಾಲ್ ಕೂಡ ರೀಸೀವ್ ಮಾಡಲ್ಲ ಎಂದಿದ್ದಾರೆ.

author-image
Chandramohan
C,M SIDDU MEETING WITH MLC

ಕಾಂಗ್ರೆಸ್ ಪರಿಷತ್ ಸದಸ್ಯರ ಜೊತೆ ಸಿಎಂ ಸಭೆ

Advertisment
  • ವಿಧಾನ ಪರಿಷತ್ ಸದಸ್ಯರ ಜೊತೆ ಸಿಎಂ ಸಿದ್ದು ಸಭೆ
  • ಪರಿಷತ್ ಸದಸ್ಯರ ಅಹವಾಲು ಆಲಿಸಿದ ಸಿಎಂ ಸಿದ್ದು
  • ಪರಿಷತ್ ಸದಸ್ಯರಿಗೆ 3 ಸಚಿವ ಸ್ಥಾನ ನೀಡಲು ಆಗ್ರಹ


ಸಿಎಂ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಶಾಸಕರ ಸಭೆಯನ್ನು ಜಿಲ್ಲಾವಾರು ನಡೆಸಿದ್ದರು. ಆದಾದ ಬಳಿಕ ಈಗ ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯರ ಸಭೆಯನ್ನು ಇಂದು ನಡೆಸಲಾಗಿದೆ. ಸಿಎಂ ನಡೆಸಿದ ಸಭೆಯಲ್ಲಿ ನಡೆದ ಮಾತುಕತೆಯ ಇನ್ ಸೈಡ್ ಡೀಟೈಲ್ಸ್ ನ್ಯೂಸ್ ಫಸ್ಟ್ ಗೆ ಲಭ್ಯವಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಆಡಳಿತ ಪಕ್ಷದ ಪರಿಷತ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಭೆಯಲ್ಲಿ ಸಚಿವರ ನಡೆ ವಿರುದ್ಧ ಕಾಂಗ್ರೆಸ್ ಪಕ್ಷದ  ಪರಿಷತ್ ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ.  ಸಚಿವರು ನಮ್ಮ ಪತ್ರಗಳಿಗೆ ಮಾನ್ಯತೆಯನ್ನ ನೀಡುತ್ತಿಲ್ಲ . ಭೇಟಿಗೆ ಅವಕಾಶವನ್ನೂ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ .  ದೂರವಾಣಿ ಕರೆಯನ್ನೂ ಸ್ವೀಕರಿಸೋದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
ಈ ವೇಳೆ ಸಚಿವರಿಗೆ ಸ್ಪಂದಿಸುವಂತೆ ಸೂಚನೆ ನೀಡುತ್ತೇನೆಂದು  ಸಿಎಂ  ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  



ಈ ನಡುವೆ, ಮೂವರು ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯವನ್ನು ಕೂಡ ಮಾಡಲಾಗಿದೆ.  ಈಗ ಪರಿಷತ್ ಸದಸ್ಯರ ಪೈಕಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ . ಮುಂದಿನ ಸಂಪುಟ ಪುನಾರಚನೆ ವೇಳೆ ಮೂವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಶಾಸಕರಿಗೆ ನೀಡಿರುವ ಶಿಷ್ಟಾಚಾರವನ್ನ ತಮಗೂ ಅನ್ವಯಿಸುವಂತೆ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರು ಸಿಎಂ ಸಿದ್ದರಾಮಯ್ಯಗೆ  ಒತ್ತಾಯಿಸಿದ್ದಾರೆ.  ಶಾಸಕರಿಗೆ ನೀಡಿರುವಂತೆ ನಮಗೂ ತಲಾ 50 ಕೋಟಿ ಅನುದಾನ ನೀಡುವಂತೆ  ಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

CM MEETING WITH CONGRESS MLC
Advertisment