newsfirstkannada.com

Breaking News: ಟ್ರಾನ್ಸ್​ಫಾರ್ಮರ್​ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ

Share :

19-07-2023

    ಏಕಾಏಕಿ ಸ್ಫೋಟಗೊಂಡ ಟ್ರಾನ್ಸ್​ಫಾರ್ಮರ್​

    ಚಮೋಲಿ ಜಿಲ್ಲೆಯ ಅಲಕನಂದಾ ನದಿ ದಡದಲ್ಲಿ ಘಟನೆ

    ಪೊಲೀಸ್​​ ಸಬ್​ ಇನ್ಸ್​ಸ್ಪೆಕ್ಟರ್​​ ಸೇರಿದಂತೆ 15 ಜನರು ಸಾವು

ಉತ್ತರಾಖಂಡದಲ್ಲಿ ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿ ದಡದಲ್ಲಿ ಟ್ರಾನ್ಸ್​ಫಾರ್ಮರ್​ ಸ್ಟೋಟಗೊಂಡಿದೆ. ಸಾವನ್ನಪ್ಪಿರುವ ಜನರು ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಮಾತನಾಡಿದ್ದು, “ಇದೊಂದು ದುಃಖಕರ ಘಟನೆ. ಜಿಲ್ಲಾಡಳಿತ, ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸ್ಥಳಕ್ಕೆ ತಲುಪಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ರಿಷಿಕೇಶದಲ್ಲಿರುವ ಏಮ್ಸ್‌ಗೆ ರವಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸ್​ ವರಿಷ್ಠಾಧಿಕಾರಿ ಪರಮೇಂದ್ರ ದೋವಲ್​ ಮಾತನಾಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕರು ವಿ. ಮುರುಗೇಶನ್​ ಮಾತನಾಡಿದ್ದು, ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡ ಕಾರಣ ಪೊಲೀಸ್​​ ಸಬ್​ ಇನ್ಸ್​ಸ್ಪೆಕ್ಟರ್​​ ಮತ್ತು ಐವರು ಹೋಮ್​ ಗಾರ್ಡ್​ಗಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಭವಿಸಿದಂತೆ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

 

Breaking News: ಟ್ರಾನ್ಸ್​ಫಾರ್ಮರ್​ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ

https://newsfirstlive.com/wp-content/uploads/2023/07/Trandformer-blast.jpg

    ಏಕಾಏಕಿ ಸ್ಫೋಟಗೊಂಡ ಟ್ರಾನ್ಸ್​ಫಾರ್ಮರ್​

    ಚಮೋಲಿ ಜಿಲ್ಲೆಯ ಅಲಕನಂದಾ ನದಿ ದಡದಲ್ಲಿ ಘಟನೆ

    ಪೊಲೀಸ್​​ ಸಬ್​ ಇನ್ಸ್​ಸ್ಪೆಕ್ಟರ್​​ ಸೇರಿದಂತೆ 15 ಜನರು ಸಾವು

ಉತ್ತರಾಖಂಡದಲ್ಲಿ ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿ ದಡದಲ್ಲಿ ಟ್ರಾನ್ಸ್​ಫಾರ್ಮರ್​ ಸ್ಟೋಟಗೊಂಡಿದೆ. ಸಾವನ್ನಪ್ಪಿರುವ ಜನರು ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಮಾತನಾಡಿದ್ದು, “ಇದೊಂದು ದುಃಖಕರ ಘಟನೆ. ಜಿಲ್ಲಾಡಳಿತ, ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸ್ಥಳಕ್ಕೆ ತಲುಪಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ರಿಷಿಕೇಶದಲ್ಲಿರುವ ಏಮ್ಸ್‌ಗೆ ರವಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸ್​ ವರಿಷ್ಠಾಧಿಕಾರಿ ಪರಮೇಂದ್ರ ದೋವಲ್​ ಮಾತನಾಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕರು ವಿ. ಮುರುಗೇಶನ್​ ಮಾತನಾಡಿದ್ದು, ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡ ಕಾರಣ ಪೊಲೀಸ್​​ ಸಬ್​ ಇನ್ಸ್​ಸ್ಪೆಕ್ಟರ್​​ ಮತ್ತು ಐವರು ಹೋಮ್​ ಗಾರ್ಡ್​ಗಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಭವಿಸಿದಂತೆ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

 

Load More