ಮಾಜಿ ಸಂಸದನಿಂದ ನೂತನ ಎಂಪಿಗೆ ಅಭಿನಂದನೆ
ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ ಪ್ರತಾಪ್ ಸಿಂಹ
ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಭಾರೀ ಜೋರು
ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ
ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾಜಿ ಸಂಸದನಿಂದ ನೂತನ ಎಂಪಿಗೆ ಅಭಿನಂದನೆ
ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ ಪ್ರತಾಪ್ ಸಿಂಹ
ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಭಾರೀ ಜೋರು
ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ
ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ