newsfirstkannada.com

ಪ್ರವೀಣ್​ ನೆಟ್ಟಾರು ಹತ್ಯೆಯ A4 ಆರೋಪಿ ಬಂಧನ.. ಎನ್​ಐಎ ಅಧಿಕಾರಿಗಳಿಗೆ ಈತ ಸಿಕ್ಕಿದ್ದೆಲ್ಲಿ ಗೊತ್ತಾ?

Share :

Published May 10, 2024 at 11:12am

    ಬೆಳ್ಳಾರೆಯಲ್ಲಿ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್​​ ನೆಟ್ಟಾರು

    ಪ್ರವೀನ್​ ನೆಟ್ಟಾರು ಹತ್ಯೆ ಮಾಡಿದ ಎ4 ಆರೋಪಿಗಾಗಿ ಬಲೆ ಬೀಸಿದ್ದ ಎನ್​ಐಎ ತಂಡ

    ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿತ್ತು

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಎನ್​ಐಎ ಬಂಧಿಸಿದೆ. ತಲೆ ಮರೆಸಿ ಪರಾರಿಯಾಗಿದ್ದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್​ನ ಬಂಧನವಾಗಿದೆ.

ಮುಸ್ತಫಾ ಪೈಚಾರ್ ಸುಳ್ಯದ‌ ಶಾಂತಿ ನಗರ ನಿವಾಸಿಯಾಗಿದ್ದು, ಪಿಎಫ್ಐ ಮುಖಂಡನಾಗಿದ್ದನು. ಪ್ರವೀಣ್​ ಹತ್ಯೆ ಬಳಿಕ ತಲೆಮರೆಸಿಕೊಂಡ ಈತನನ್ನು ಹಾಸನದ‌ ಸಕಲೇಶಪುರ ಬಳಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಮೊದಲಿಗೆ ಎಣ್ಣೆ ಪಾರ್ಟಿ, ಆಮೇಲೆ ಜಗಳ, ನಂತರ ಕೊಲೆ.. ದೊಡ್ಡಪ್ಪನ ಮಗನನ್ನೇ ಬರ್ಬರವಾಗಿ ಕೊಂದ ತಮ್ಮ 

ಎನ್​ಐಎ ಅಧಿಕಾರಿಗಳು ಮುಸ್ತಫಾ ಪೈಚಾರ್ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆತ ತಲೆಮರೆಸಿಕೊಂಡಿದ್ದ. ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇದನ್ನೂ ಓದಿ: ಅಮೃತ್​ ಪೌಲ್​ ಇದ್ದ ಸೆಲ್​ನಲ್ಲಿ H D ರೇವಣ್ಣ.. ಸಿಂಗಲ್​ ಕೊಠಡಿ, 6 ಮಂದಿ ಎಸ್ಕಾರ್ಟ್.. ಜೈಲಿನಲ್ಲಿ ವ್ಯವಸ್ಥೆ ಹೇಗಿದೆ?

ಕೊನೆಗೆ ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಡಗಿದ್ದನು. NIA ಇನ್ಸ್ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ಮುಸ್ತಫಾ ಪೈಚಾರ್​ನ ಬಂಧನವಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್.ಐ.ಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರವೀಣ್​ ನೆಟ್ಟಾರು ಹತ್ಯೆಯ A4 ಆರೋಪಿ ಬಂಧನ.. ಎನ್​ಐಎ ಅಧಿಕಾರಿಗಳಿಗೆ ಈತ ಸಿಕ್ಕಿದ್ದೆಲ್ಲಿ ಗೊತ್ತಾ?

https://newsfirstlive.com/wp-content/uploads/2024/05/Praveen-Nettar-1.jpg

    ಬೆಳ್ಳಾರೆಯಲ್ಲಿ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್​​ ನೆಟ್ಟಾರು

    ಪ್ರವೀನ್​ ನೆಟ್ಟಾರು ಹತ್ಯೆ ಮಾಡಿದ ಎ4 ಆರೋಪಿಗಾಗಿ ಬಲೆ ಬೀಸಿದ್ದ ಎನ್​ಐಎ ತಂಡ

    ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿತ್ತು

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಎನ್​ಐಎ ಬಂಧಿಸಿದೆ. ತಲೆ ಮರೆಸಿ ಪರಾರಿಯಾಗಿದ್ದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್​ನ ಬಂಧನವಾಗಿದೆ.

ಮುಸ್ತಫಾ ಪೈಚಾರ್ ಸುಳ್ಯದ‌ ಶಾಂತಿ ನಗರ ನಿವಾಸಿಯಾಗಿದ್ದು, ಪಿಎಫ್ಐ ಮುಖಂಡನಾಗಿದ್ದನು. ಪ್ರವೀಣ್​ ಹತ್ಯೆ ಬಳಿಕ ತಲೆಮರೆಸಿಕೊಂಡ ಈತನನ್ನು ಹಾಸನದ‌ ಸಕಲೇಶಪುರ ಬಳಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಮೊದಲಿಗೆ ಎಣ್ಣೆ ಪಾರ್ಟಿ, ಆಮೇಲೆ ಜಗಳ, ನಂತರ ಕೊಲೆ.. ದೊಡ್ಡಪ್ಪನ ಮಗನನ್ನೇ ಬರ್ಬರವಾಗಿ ಕೊಂದ ತಮ್ಮ 

ಎನ್​ಐಎ ಅಧಿಕಾರಿಗಳು ಮುಸ್ತಫಾ ಪೈಚಾರ್ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆತ ತಲೆಮರೆಸಿಕೊಂಡಿದ್ದ. ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇದನ್ನೂ ಓದಿ: ಅಮೃತ್​ ಪೌಲ್​ ಇದ್ದ ಸೆಲ್​ನಲ್ಲಿ H D ರೇವಣ್ಣ.. ಸಿಂಗಲ್​ ಕೊಠಡಿ, 6 ಮಂದಿ ಎಸ್ಕಾರ್ಟ್.. ಜೈಲಿನಲ್ಲಿ ವ್ಯವಸ್ಥೆ ಹೇಗಿದೆ?

ಕೊನೆಗೆ ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಡಗಿದ್ದನು. NIA ಇನ್ಸ್ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ಮುಸ್ತಫಾ ಪೈಚಾರ್​ನ ಬಂಧನವಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್.ಐ.ಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More