/newsfirstlive-kannada/media/post_attachments/wp-content/uploads/2025/05/Suhas-shetty-4.jpg)
ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನಿನ್ನೆ ಮಂಗಳೂರು ಹೊರವಲಯದ ಕಿನ್ನಿಪದವು ಬಳಿ 6 ಜನರ ದುಷ್ಕರ್ಮಿಗಳ ತಂಡ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ.. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್
ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಲಿಂಕ್..
ಸುಹಾಸ್ ಶೆಟ್ಟಿ, ಹಿಂದೂ ಕಾರ್ಯಕರ್ತನಾಗಿದ್ದ. ಈತನ ಕೊಲೆಗೂ ಪ್ರವೀಣ್ ನೆಟ್ಟಾರು ಹತ್ಯೆಗೂ ಸಂಬಂಧವಿದೆ ಎನ್ನಲಾಗ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನ ಆರೋಪಿಯಾಗಿದ್ದ. ಪ್ರವೀಣ್ ನೆಟ್ಟಾರು ಕೊಲೆ ಪ್ರತಿಕಾರಕ್ಕೆ ಸುಹಾಸ್ ಶೆಟ್ಟಿ ಸುರತ್ಕಲ್ನ ಫಾಜಿಲ್ನನ್ನ ಹತ್ಯೆ ಮಾಡಿದ ಆರೋಪ ಇತ್ತು. ಈ ಸಂಬಂಧ ಸುಹಾಸ್ ಮೇಲೆ ಮಂಗಳೂರು ಪೊಲೀಸರು ರೌಡಿ ಶೀಟರ್ ಓಪನ್ ಮಾಡಿದ್ರು. ಇದೇ ಸೇಡಿನ ಮುಂದುವರೆದ ಭಾಗವಾಗಿ ಈ ಕೊಲೆ ನಡೆದಿದೆ ಎನ್ನಲಾಗ್ತಿದೆ.
ಇದನ್ನೂ ಓದಿ: ಸುಹಾಸ್ ಶೆಟ್ಟಿ ಪ್ರಕರಣ.. ಮಂಗಳೂರು ಕಮಿಷನರ್ ನೀಡಿದ ಮಾಹಿತಿ ಏನು..?
ಇದೇ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, 2022ರಲ್ಲಿ ಫಾಸಿಲ್ ಎಂಬಾತನ ಹತ್ಯೆ ಆಗಿತ್ತು. ಈ ಪ್ರಕರಣದ ಆರೋಪಿಯೇ ಸುಹಾಸ್ ಶೆಟ್ಟಿ. ಸುಹಾಸ್ ಶೆಟ್ಟಿ ಮೇಲೆ ಸುಮಾರು ಐದು ಕೇಸ್ಗಳಿದ್ದವು. ಒಂದು ವರ್ಷದ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ. ನಿನ್ನೆಯ ಪ್ರಕರಣ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ. ಇನ್ನು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗುತ್ತೆ. ಇದು ಪ್ರತೀಕಾರದ ಹತ್ಯೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಅಂತಾ ತಿಳಿಸಿದರು.
ಇದನ್ನೂ ಓದಿ: ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಕೊಚ್ಚಿ ಕೊಂದ 6 ದುಷ್ಕರ್ಮಿಗಳು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ