/newsfirstlive-kannada/media/post_attachments/wp-content/uploads/2024/11/Guruprasad-4.jpg)
ಬೆಂಗಳೂರು: ಮಠ ಖ್ಯಾತಿಯ ಗುರುಪ್ರಸಾದ್ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗುರುಪ್ರಸಾದ್ ತಮ್ಮ ಮಾದನಾಯಕಹಳ್ಳಿ ಇರೋ ಅಪಾರ್ಟ್ಮೆಂಟ್ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸಾಲದ ಹೊರೆಯಿಂದ ಆತ್ಮಹತ್ಯೆ ಶಂಕೆ
ಸದ್ಯಕ್ಕೆ ಸಿಕ್ಕ ಮಾಹಿತಿ ಪ್ರಕಾರ ಗುರುಪ್ರಸಾದ್ ಕೋಟ್ಯಾಂತರ ರೂ. ಸಾಲು ಮಾಡಿಕೊಂಡಿದ್ದರು. ಸಾಲದ ಹೊರೆ ತಾಳಲಾರದೆ ಆಗಾಗ ತನ್ನ ಮನೆ ಬದಲಾವಣೆ ಮಾಡುತ್ತಿದ್ದರು. ಇವರ ವಿರುದ್ಧ ಹಲವು ದೂರುಗಳು ಕೂಡ ದಾಖಲಾಗಿದ್ದವು. ರಂಗನಾಯಕ ಸಿನಿಮಾ ಕೂಡ ಸೋತಿತ್ತು. ಈ ಕಾರಣದಿಂದಲೇ ಗುರುಪ್ರಸಾದ್ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಅನಾಥವಾದ ಗುರುಪ್ರಸಾದ್
ಗುರುಪ್ರಸಾದ್ ಮೃತದೇಹ ಅನಾಥವಾಗಿದೆ. ಇವರನ್ನು ತಮ್ಮ ಕುಟುಂಬಸ್ಥರು ಯಾರು ಬಂದಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಗುರುಪ್ರಸಾದ್ ಮೃತದೇಹ ಕರೆ ತರಲಾಗಿದೆ.
ಅಂತ್ಯಸಂಸ್ಕಾರಕ್ಕೆ ಸಿದ್ಧತೆ
ನಟ ದುನಿಯಾ ವಿಜಯ್, ಡಾಲಿ ಧನಂಜಯ, ಸತೀಶ್ ನೀನಾಸಂ ಅವರ ನೇತೃತ್ವದಲ್ಲಿ ಗುರುಪ್ರಸಾದ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಇವರು ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ್ದು, ಎಲ್ಲವನ್ನು ಪರಿಶೀಲಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ