newsfirstkannada.com

ಅಣ್ಣಾಮಲೈ ಬೆನ್ನು ತಟ್ಟಿ ಶಹಬ್ಬಾಸ್‌ ಗಿರಿ ಕೊಟ್ಟ ಪ್ರಧಾನಿ ಮೋದಿ; ವಿಡಿಯೋ ಫುಲ್‌ ವೈರಲ್‌!

Share :

Published February 27, 2024 at 6:02pm

    ನರೇಂದ್ರ ಮೋದಿಗೆ ಅಣ್ಣಾಮಲೈ ಮೇಲೆ ಎಷ್ಟೊಂದು ಪ್ರೀತಿ ಗೊತ್ತಾ?

    ಅಣ್ಣಾಮಲೈ ಅವರನ್ನೇ ಹುಡುಕಿ, ಹುಡುಕಿ ಕರೆದ ನರೇಂದ್ರ ಮೋದಿ

    100 ದಿನಗಳ ನನ್ನ ಭೂಮಿ, ನನ್ನ ಜನ ಪಾದಯಾತ್ರೆ ಸಮಾರೋಪ

ತಿರುಪ್ಪೂರ್: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ರಾಜ್ಯದ ಬಿಜೆಪಿ ನಾಯಕರಿಗೆ ಹೊಸ ಚೈತನ್ಯ ತುಂಬಿದ್ದಾರೆ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು 100 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದರು. ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನನ್ನ ಭೂಮಿ, ನನ್ನ ಜನ ಹೆಸರಿನ ಪಾದಯಾತ್ರೆ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಅಣ್ಣಾಮಲೈ ಅವರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ.

ಪಲ್ಲಡಂನಲ್ಲಿ ಆಯೋಜಿಸಿದ್ದ ಬಿಜೆಪಿ ಪಕ್ಷದ ಬೃಹತ್ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವೇದಿಕೆ ಮೇಲೆ ಬಂದ ಪ್ರಧಾನಿ ಮೋದಿ ವಿಶೇಷವಾಗಿ ಅಣ್ಣಾಮಲೈ ಅವರನ್ನೇ ಹುಡುಕಿ, ಹುಡುಕಿ ಕರೆದು ಕೈ ಮೇಲೆತ್ತುವ ಮೂಲಕ ಗಮನ ಸೆಳೆದರು.

ಅಣ್ಣಾಮಲೈ ಜೊತೆ ವೇದಿಕೆ ಹಂಚಿಕೊಳ್ಳುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ತಮಗೆ ಅಣ್ಣಾಮಲೈ ಅವರ ಮೇಲೆ ಎಷ್ಟು ಪ್ರೀತಿ ಇದೆ ಅನ್ನೋದನ್ನು ನಿರೂಪಿಸಿದ್ದಾರೆ. ಭಾಷಣ ಮಾಡಿ ಬಂದ ಅಣ್ಣಾಮಲೈ ಅವರಿಗೆ ಬೆನ್ನು, ತಟ್ಟಿ ಶಹಬ್ಬಾಸ್‌ಗಿರಿ ಕೊಟ್ಟಿದ್ದಾರೆ. ಅಣ್ಣಾಮಲೈ ಅವರ ಬೆನ್ನು ತಟ್ಟಿದ್ದ ಪ್ರಧಾನಿ ಮೋದಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಅಣ್ಣಾಮಲೈ ಅವರ ಮೂಲಕ ಬಿಜೆಪಿ ಹೊಸ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಣ್ಣಾಮಲೈ ಬೆನ್ನು ತಟ್ಟಿ ಶಹಬ್ಬಾಸ್‌ ಗಿರಿ ಕೊಟ್ಟ ಪ್ರಧಾನಿ ಮೋದಿ; ವಿಡಿಯೋ ಫುಲ್‌ ವೈರಲ್‌!

https://newsfirstlive.com/wp-content/uploads/2024/02/Modi-Annamalai.jpg

    ನರೇಂದ್ರ ಮೋದಿಗೆ ಅಣ್ಣಾಮಲೈ ಮೇಲೆ ಎಷ್ಟೊಂದು ಪ್ರೀತಿ ಗೊತ್ತಾ?

    ಅಣ್ಣಾಮಲೈ ಅವರನ್ನೇ ಹುಡುಕಿ, ಹುಡುಕಿ ಕರೆದ ನರೇಂದ್ರ ಮೋದಿ

    100 ದಿನಗಳ ನನ್ನ ಭೂಮಿ, ನನ್ನ ಜನ ಪಾದಯಾತ್ರೆ ಸಮಾರೋಪ

ತಿರುಪ್ಪೂರ್: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ರಾಜ್ಯದ ಬಿಜೆಪಿ ನಾಯಕರಿಗೆ ಹೊಸ ಚೈತನ್ಯ ತುಂಬಿದ್ದಾರೆ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು 100 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದರು. ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನನ್ನ ಭೂಮಿ, ನನ್ನ ಜನ ಹೆಸರಿನ ಪಾದಯಾತ್ರೆ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಅಣ್ಣಾಮಲೈ ಅವರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ.

ಪಲ್ಲಡಂನಲ್ಲಿ ಆಯೋಜಿಸಿದ್ದ ಬಿಜೆಪಿ ಪಕ್ಷದ ಬೃಹತ್ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವೇದಿಕೆ ಮೇಲೆ ಬಂದ ಪ್ರಧಾನಿ ಮೋದಿ ವಿಶೇಷವಾಗಿ ಅಣ್ಣಾಮಲೈ ಅವರನ್ನೇ ಹುಡುಕಿ, ಹುಡುಕಿ ಕರೆದು ಕೈ ಮೇಲೆತ್ತುವ ಮೂಲಕ ಗಮನ ಸೆಳೆದರು.

ಅಣ್ಣಾಮಲೈ ಜೊತೆ ವೇದಿಕೆ ಹಂಚಿಕೊಳ್ಳುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ತಮಗೆ ಅಣ್ಣಾಮಲೈ ಅವರ ಮೇಲೆ ಎಷ್ಟು ಪ್ರೀತಿ ಇದೆ ಅನ್ನೋದನ್ನು ನಿರೂಪಿಸಿದ್ದಾರೆ. ಭಾಷಣ ಮಾಡಿ ಬಂದ ಅಣ್ಣಾಮಲೈ ಅವರಿಗೆ ಬೆನ್ನು, ತಟ್ಟಿ ಶಹಬ್ಬಾಸ್‌ಗಿರಿ ಕೊಟ್ಟಿದ್ದಾರೆ. ಅಣ್ಣಾಮಲೈ ಅವರ ಬೆನ್ನು ತಟ್ಟಿದ್ದ ಪ್ರಧಾನಿ ಮೋದಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಅಣ್ಣಾಮಲೈ ಅವರ ಮೂಲಕ ಬಿಜೆಪಿ ಹೊಸ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More