ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬಸ್.. ಮಂಡ್ಯದಲ್ಲಿ 25 ಪ್ರಯಾಣಿಕರು ಜಸ್ಟ್ ಮಿಸ್!

author-image
Veena Gangani
Updated On
ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬಸ್.. ಮಂಡ್ಯದಲ್ಲಿ 25 ಪ್ರಯಾಣಿಕರು ಜಸ್ಟ್ ಮಿಸ್!
Advertisment
  • ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
  • ಬೆಂಗಳೂರು-ಮಂಗಳೂರು ಹೈವೆಯಲ್ಲಿ ಹೋಗುತ್ತಿದ್ದ ಬಸ್
  • ಮಂಡ್ಯದ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಘಟನೆ

ಮಂಡ್ಯ: ಹೆದ್ದಾರಿಯಲ್ಲೇ ಖಾಸಗಿ ಟ್ರಾವೆಲ್ಸ್ ಬಸ್ ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.

ಇದನ್ನೂ ಓದಿ: ಸೀರೆ ಜಾಗಕ್ಕೆ ಪ್ಯಾಂಟ್ ಶರ್ಟ್​.. ಶ್ರಾವಣಿ ಸುಬ್ರಹ್ಮಣ್ಯ ಕಾಂತಮ್ಮತ್ತೆಯ ರೆಬೆಲ್​ ಲುಕ್​ಗೆ ವೀಕ್ಷಕರು ಫಿದಾ

ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್​ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

publive-image

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನ ಬಸ್​ನಿಂದ ಕೆಳಗಿಳಿಸಿದ್ದಾರೆ. ಬಸ್ ನಿಲ್ಲಿಸುತ್ತಿದ್ದಂತೆ ಸ್ಥಳದಲ್ಲೇ ಉರಿದು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಬದುಕುಳಿದಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment