/newsfirstlive-kannada/media/post_attachments/wp-content/uploads/2024/10/BNG_RTO.jpg)
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗುವ ಜನರಿಂದ ಖಾಸಗಿ ಬಸ್ಗಳ ಸುಲಿಗೆ ಆರೋಪ ಹಿನ್ನೆಲೆ ದಿಢೀರ್ ದಾಳಿ ನಡೆಸಲಾಗಿದೆ.
ದೀಪಾವಳಿ ಹಬ್ಬಕ್ಕಾಗಿ ಖಾಸಗಿ ಬಸ್ಗಳು ಟಿಕೆಟ್ ದರವನ್ನು ಭಾರೀ ಮಟ್ಟದಲ್ಲಿ ಹೆಚ್ಚಿಸಿದ ಕಾರಣ ಆರ್ಟಿಓ ಅಧಿಕಾರಿಗಳು ಹಾಗೂ ಹೆಚ್ಚುವರಿ ಆಯುಕ್ತರು ದಾಳಿ ನಡೆಸಿ ಪರೀಶಿಲನೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ನೇತೃತ್ವದಲ್ಲಿ ಬಸ್ಗಳನ್ನ ಪರಿಶೀಲನೆ ಮಾಡಲಾಗಿದೆ.
ಇದನ್ನೂ ಓದಿ:INDW vs NZW; ಮೈದಾನದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ರಾಧ.. ಕ್ರಿಕೆಟ್ ಲೋಕ ಫುಲ್ ಫಿದಾ!
ಇನ್ನು ಪ್ರಯಾಣಿಕರಿಗೆ ಹೊರೆಯಾಗುವಂತೆ ಟಿಕೆಟ್ ದರವನ್ನ ಏಕಾಏಕಿ ಹೆಚ್ಚು ಮಾಡುವಂತಿಲ್ಲ ಎಂದು ಸಾರಿಗೆ ಇಲಾಖೆ ಹೇಳಿದೆ. ಎಚ್ಚರಿಕೆ ನಡುವೆಯೂ ಟಿಕೆಟ್ ದರ ಹೆಚ್ಚಿಸಿದ್ದ ಖಾಸಗಿ ಬಸ್ಗಳಿಗೆ ನೋಟಿಸ್ ನೀಡಲಾಗಿದೆ. ಚಾಲಕನ ಮಾಹಿತಿ, ಲೈಸನ್ಸ್, ಎಫ್ಸಿ ಸೇರಿದಂತೆ ಹಲವು ಮಾಹಿತಿ ಪಡೆದುಕೊಂಡು ಚೆಕ್ ರಿಪೋರ್ಟ್ ಅನ್ನು ಅಧಿಕಾರಿಗಳು ನೀಡಿದ್ದಾರೆ. ಎಷ್ಟು ಜನ ಪ್ರಯಾಣಿಕರು ಹಾಗೂ ಟಿಕೆಟ್ ದರ ಎಷ್ಟು ಎಂಬುದೆಲ್ಲಾ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿಕೊಂಡಿದ್ದಾರೆ. ಕೆಲ ಪ್ರಯಾಣಿಕರಿಂದ ಟಿಕೆಟ್ಗೆ ಎಷ್ಟು ಹಣ ನೀಡಿದ್ದೀರಿ ಎಂಬುವ ಮಾಹಿತಿಯನ್ನು ಪಡೆದುಕೊಂಡು ಫೋನ್ನಲ್ಲಿ ಫೋಟೋ ಕೂಡ ತೆಗೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ