newsfirstkannada.com

ತಂದೆ ಮೈ ಬಣ್ಣದ ಬಗ್ಗೆ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್​​ ಖರ್ಗೆ ಆಕ್ರೋಶ

Share :

02-08-2023

    ಮಲ್ಲಿಕಾರ್ಜುನ್​ ಖರ್ಗೆ ಮೈ ಬಣ್ಣದ ಬಗ್ಗೆ ಅವಹೇಳನ

    ಮಾಜಿ ಮಿನಿಸ್ಟರ್​​ ಆರಗ ವಿರುದ್ಧ ಭಾರೀ ಆಕ್ರೋಶ..!

    ಸಚಿವ ಪ್ರಿಯಾಂಕ್​​ ಖರ್ಗೆಯಿಂದ ಸಖತ್​ ಕೌಂಟರ್​​

ಬೆಂಗಳೂರು: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರೇ ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ. ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಪುತ್ರ ಸಚಿವ ಪ್ರಿಯಾಂಕ್​​ ಖರ್ಗೆ ಟ್ವೀಟ್​ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಮಿನಿಸ್ಟರ್​​ ಪ್ರಿಯಾಂಕ್​​ ಖರ್ಗೆ, ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು. ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ ಎಂದಿದ್ದಾರೆ.

ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಕೌಂಟರ್​​ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಮಾಜಿ ಹೋಮ್​ ಮಿನಿಸ್ಟರ್​​ ಆರಗ ಜ್ಞಾನೇಂದ್ರ ಈಗ ಯೂಟರ್ನ್​​ ಹೊಡೆದಿದ್ದಾರೆ. ತನ್ನ ಹೇಳಿಕೆ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಎಚ್ಚೆತ್ತ ಆರಗ ಜ್ಞಾನೇಂದ್ರ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಏನಿದು ವಿವಾದ?

ಮಲೆನಾಡಿನ ಬಗ್ಗೆ ಗೊತ್ತಿರದ ಆ ಕಡೆಯ ಮಿನಿಸ್ಟರ್​ ಸಾಹೇಬ್ರು ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ. ಸ್ವಲ್ಪ ತಲೆ ಕೂದಲು ಮುಚ್ಚಿಕೊಂಡಿರುವುದೇ ಅವರಿಗೆ ಅದೇ ನೆರಳಂತೆ ತಿಳಿದಿರುತ್ತಾರೆ ಎಂದು ಈ ಹಿಂದೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಬಗ್ಗೆ ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರಗ ಜ್ಞಾನೇಂದ್ರ ಅವರ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೇಸ್​​ಕೋರ್ಸ್​ನ ಕಾಂಗ್ರೆಸ್ ಭವನದ ಬಳಿ ಕೈ​ ಕಾರ್ಯಕರ್ತರು ಆರಗ ಜ್ಞಾನೇಂದ್ರ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಂದೆ ಮೈ ಬಣ್ಣದ ಬಗ್ಗೆ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್​​ ಖರ್ಗೆ ಆಕ್ರೋಶ

https://newsfirstlive.com/wp-content/uploads/2023/08/Aaraga_Priyank-Kharge.jpg

    ಮಲ್ಲಿಕಾರ್ಜುನ್​ ಖರ್ಗೆ ಮೈ ಬಣ್ಣದ ಬಗ್ಗೆ ಅವಹೇಳನ

    ಮಾಜಿ ಮಿನಿಸ್ಟರ್​​ ಆರಗ ವಿರುದ್ಧ ಭಾರೀ ಆಕ್ರೋಶ..!

    ಸಚಿವ ಪ್ರಿಯಾಂಕ್​​ ಖರ್ಗೆಯಿಂದ ಸಖತ್​ ಕೌಂಟರ್​​

ಬೆಂಗಳೂರು: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರೇ ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ. ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಪುತ್ರ ಸಚಿವ ಪ್ರಿಯಾಂಕ್​​ ಖರ್ಗೆ ಟ್ವೀಟ್​ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಮಿನಿಸ್ಟರ್​​ ಪ್ರಿಯಾಂಕ್​​ ಖರ್ಗೆ, ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು. ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ ಎಂದಿದ್ದಾರೆ.

ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಕೌಂಟರ್​​ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಮಾಜಿ ಹೋಮ್​ ಮಿನಿಸ್ಟರ್​​ ಆರಗ ಜ್ಞಾನೇಂದ್ರ ಈಗ ಯೂಟರ್ನ್​​ ಹೊಡೆದಿದ್ದಾರೆ. ತನ್ನ ಹೇಳಿಕೆ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಎಚ್ಚೆತ್ತ ಆರಗ ಜ್ಞಾನೇಂದ್ರ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಏನಿದು ವಿವಾದ?

ಮಲೆನಾಡಿನ ಬಗ್ಗೆ ಗೊತ್ತಿರದ ಆ ಕಡೆಯ ಮಿನಿಸ್ಟರ್​ ಸಾಹೇಬ್ರು ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ. ಸ್ವಲ್ಪ ತಲೆ ಕೂದಲು ಮುಚ್ಚಿಕೊಂಡಿರುವುದೇ ಅವರಿಗೆ ಅದೇ ನೆರಳಂತೆ ತಿಳಿದಿರುತ್ತಾರೆ ಎಂದು ಈ ಹಿಂದೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಬಗ್ಗೆ ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರಗ ಜ್ಞಾನೇಂದ್ರ ಅವರ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೇಸ್​​ಕೋರ್ಸ್​ನ ಕಾಂಗ್ರೆಸ್ ಭವನದ ಬಳಿ ಕೈ​ ಕಾರ್ಯಕರ್ತರು ಆರಗ ಜ್ಞಾನೇಂದ್ರ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More