newsfirstkannada.com

ರಾಷ್ಟ್ರೀಯ ಸಂವಹನ ಕಾಂಗ್ರೆಸ್​ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ.ಬಿ.ಕೆ ರವಿ ಆಯ್ಕೆ

Share :

27-08-2023

    NCC ವಿಚಾರ ಸಂಕಿರಣ, ಪ್ರಕಟಣೆಗಳು, ತರಬೇತಿ ನಡೆಸುತ್ತೆ

    ಅಧ್ಯಕ್ಷರಾಗಿ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ ಆಯ್ಕೆ

    ವಿಶ್ವಭಾರತಿ ವಿವಿಯಲ್ಲಿ ಕೇಂದ್ರ ಸ್ಥಾನ ಹೊಂದಿದ ಎನ್​ಸಿಸಿ

​ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ (NCC)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​

ದೇಶದ ಮಾಧ್ಯಮ ವಿದ್ವಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿ ಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ. ​

ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್​ಸಿಸಿ ಕಾರ್ಯನಿರ್ವಹಿಸಲಿದೆ. ಇದು​ ಕೋಲ್ಕತ್ತದ ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸ್ಥಾನ ಹೊಂದಿದೆ. ಸದ್ಯ ಎನ್​ಸಿಸಿಯ ಅಧ್ಯಕ್ಷರಾಗಿ ವಿಶ್ವಭಾರತಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ ಆಯ್ಕೆಯಾಗಿದ್ದಾರೆ. ಅಲ್ಲದೇ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ.ಬಿ.ಕೆ ರವಿಯವರು ಆಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಮಕನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಜಿ. ಸುರೇಶ್ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ವರ ಉಕ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ ಚುನಾಯಿತರಾಗಿದ್ದಾರೆ.

​ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಷ್ಟ್ರೀಯ ಸಂವಹನ ಕಾಂಗ್ರೆಸ್​ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ.ಬಿ.ಕೆ ರವಿ ಆಯ್ಕೆ

https://newsfirstlive.com/wp-content/uploads/2023/08/BK_RAVI.jpg

    NCC ವಿಚಾರ ಸಂಕಿರಣ, ಪ್ರಕಟಣೆಗಳು, ತರಬೇತಿ ನಡೆಸುತ್ತೆ

    ಅಧ್ಯಕ್ಷರಾಗಿ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ ಆಯ್ಕೆ

    ವಿಶ್ವಭಾರತಿ ವಿವಿಯಲ್ಲಿ ಕೇಂದ್ರ ಸ್ಥಾನ ಹೊಂದಿದ ಎನ್​ಸಿಸಿ

​ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ (NCC)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​

ದೇಶದ ಮಾಧ್ಯಮ ವಿದ್ವಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿ ಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ. ​

ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್​ಸಿಸಿ ಕಾರ್ಯನಿರ್ವಹಿಸಲಿದೆ. ಇದು​ ಕೋಲ್ಕತ್ತದ ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸ್ಥಾನ ಹೊಂದಿದೆ. ಸದ್ಯ ಎನ್​ಸಿಸಿಯ ಅಧ್ಯಕ್ಷರಾಗಿ ವಿಶ್ವಭಾರತಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ ಆಯ್ಕೆಯಾಗಿದ್ದಾರೆ. ಅಲ್ಲದೇ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ.ಬಿ.ಕೆ ರವಿಯವರು ಆಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಮಕನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಜಿ. ಸುರೇಶ್ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ವರ ಉಕ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ ಚುನಾಯಿತರಾಗಿದ್ದಾರೆ.

​ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More