ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯ ಕೊಲೆ
ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ದುಷ್ಕರ್ಮಿಗಳು
ವಿಚಾರಣೆಗೆ ಕರೆಯುತ್ತಿದ್ದಂತೆ ಆರೋಪಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವ್ಯಕ್ತಿಯನ್ನು ಕೊಂದು ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವಂಡಮಾನ್ ಜಲಾಶಯದ ಬಳಿ ನಡೆದಿದೆ. ದಾದಿವಾರಪಲ್ಲಿ ಗ್ರಾಮದ ವೆಂಕಟರಮಣ ನಾಯಕ್ (45) ಕೊಲೆಯಾದ ವ್ಯಕ್ತಿ .
ಜನವರಿ 7 ರಂದು ನಡೆದಿರುವ ಕೊಲೆ ಪ್ರಕರಣ ಇದಾಗಿದ್ದು, ಕೊಲೆ ಆರೋಪಿ ಬಾಬುನನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪ್ರಭಾಕರ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಮೀನು ವಿವಾದ ಹಿನ್ನೆಲೆ ವೆಂಕಟರಮಣ ನಾಯಕ್ನನ್ನು ಆರೋಪಿಗಳು ಕೊಲೆ ಮಾಡಿದ್ದಾರೆ. ಬಳಿಕ ಶವ ಸುಟ್ಟು ಹಾಕಿದ್ದಾರೆ. ಇನ್ನು ಈ ಪ್ರಕರಣ ಆಂಧ್ರಪ್ರದೇಶದ ಅಮ್ಮಡಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣವನ್ನು ಭೇದಿಸಲು ಹೊರಟ ಪೊಲೀಸರಿಗೆ ಆರೋಪಿ ಬಾಬು ಸಿಕ್ಕಿದ್ದಾನೆ.
ಅತ್ತ ಪೊಲೀಸರು ವಿಚಾರಣೆಗೆ ಕರೆಯುತ್ತಿದ್ದಂತೆ ಆರೋಪಿ ಪ್ರಭಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯ ಕೊಲೆ
ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ದುಷ್ಕರ್ಮಿಗಳು
ವಿಚಾರಣೆಗೆ ಕರೆಯುತ್ತಿದ್ದಂತೆ ಆರೋಪಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವ್ಯಕ್ತಿಯನ್ನು ಕೊಂದು ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವಂಡಮಾನ್ ಜಲಾಶಯದ ಬಳಿ ನಡೆದಿದೆ. ದಾದಿವಾರಪಲ್ಲಿ ಗ್ರಾಮದ ವೆಂಕಟರಮಣ ನಾಯಕ್ (45) ಕೊಲೆಯಾದ ವ್ಯಕ್ತಿ .
ಜನವರಿ 7 ರಂದು ನಡೆದಿರುವ ಕೊಲೆ ಪ್ರಕರಣ ಇದಾಗಿದ್ದು, ಕೊಲೆ ಆರೋಪಿ ಬಾಬುನನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪ್ರಭಾಕರ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಮೀನು ವಿವಾದ ಹಿನ್ನೆಲೆ ವೆಂಕಟರಮಣ ನಾಯಕ್ನನ್ನು ಆರೋಪಿಗಳು ಕೊಲೆ ಮಾಡಿದ್ದಾರೆ. ಬಳಿಕ ಶವ ಸುಟ್ಟು ಹಾಕಿದ್ದಾರೆ. ಇನ್ನು ಈ ಪ್ರಕರಣ ಆಂಧ್ರಪ್ರದೇಶದ ಅಮ್ಮಡಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣವನ್ನು ಭೇದಿಸಲು ಹೊರಟ ಪೊಲೀಸರಿಗೆ ಆರೋಪಿ ಬಾಬು ಸಿಕ್ಕಿದ್ದಾನೆ.
ಅತ್ತ ಪೊಲೀಸರು ವಿಚಾರಣೆಗೆ ಕರೆಯುತ್ತಿದ್ದಂತೆ ಆರೋಪಿ ಪ್ರಭಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ