newsfirstkannada.com

ಪಿಎಸ್‌ಐ ನೇಮಕಾತಿ ಹಗರಣ; ಇಂದು ತೀರ್ಪು ಪ್ರಕಟಿಸಲಿದೆ ಕರ್ನಾಟಕ ಹೈಕೋರ್ಟ್‌

Share :

10-11-2023

    ಇಂದು ಮಧ್ಯಾಹ್ನ 1.25ಕ್ಕೆ ತೀರ್ಪು ಪ್ರಕಟ

    ಸರ್ಕಾರಕ್ಕೆ ಪ್ರಕರಣದ ಕುರಿತಂತೆ ತನಿಖಾ ವರದಿ ಸಲ್ಲಿಸಬೇಕಿದೆ

    100ಕ್ಕೂ ಅಧಿಕ ಮಂದಿ ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆ

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಾಹ್ನ 1.25ಕ್ಕೆ ಪ್ರಕಟಿಸಲಿದೆ.

ಇನ್ನು ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿ ಸರ್ಕಾರ ನೇಮಿಸಿರುವ ಹೈಕೋರ್ಟ್​​ ನಿವೃತ್ತ ನ್ಯಾ. ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ಇದೇ ತಿಂಗಳ ಕೊನೆಯ ವಾರದಲ್ಲಿ ಸರ್ಕಾರಕ್ಕೆ ಪ್ರಕರಣದ ಕುರಿತಂತೆ ತನಿಖಾ ವರದಿ ಸಲ್ಲಿಸಲಿದೆ. ​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಿಎಸ್‌ಐ ನೇಮಕಾತಿ ಹಗರಣ; ಇಂದು ತೀರ್ಪು ಪ್ರಕಟಿಸಲಿದೆ ಕರ್ನಾಟಕ ಹೈಕೋರ್ಟ್‌

https://newsfirstlive.com/wp-content/uploads/2023/06/HIGHCOURT.jpg

    ಇಂದು ಮಧ್ಯಾಹ್ನ 1.25ಕ್ಕೆ ತೀರ್ಪು ಪ್ರಕಟ

    ಸರ್ಕಾರಕ್ಕೆ ಪ್ರಕರಣದ ಕುರಿತಂತೆ ತನಿಖಾ ವರದಿ ಸಲ್ಲಿಸಬೇಕಿದೆ

    100ಕ್ಕೂ ಅಧಿಕ ಮಂದಿ ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆ

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಾಹ್ನ 1.25ಕ್ಕೆ ಪ್ರಕಟಿಸಲಿದೆ.

ಇನ್ನು ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿ ಸರ್ಕಾರ ನೇಮಿಸಿರುವ ಹೈಕೋರ್ಟ್​​ ನಿವೃತ್ತ ನ್ಯಾ. ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ಇದೇ ತಿಂಗಳ ಕೊನೆಯ ವಾರದಲ್ಲಿ ಸರ್ಕಾರಕ್ಕೆ ಪ್ರಕರಣದ ಕುರಿತಂತೆ ತನಿಖಾ ವರದಿ ಸಲ್ಲಿಸಲಿದೆ. ​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More