ಈ ಆಚರಣೆ ನಿಂತರೆ 18 ವರ್ಷ ದೇವಾಲಯ ಮುಚ್ಚುತ್ತದೆ
ದೇಗುಲದಲ್ಲಿರುವ ಸುದರ್ಶನ ಚಕ್ರದ ವಿಶೇಷ ಏನು ಗೊತ್ತಾ?
ವಿಜ್ಞಾನಕ್ಕೆ ಸೆಡ್ಡು ಹೊಡೆಯೋ ವಿಸ್ಮಯಗಳ ತಾಣ
ಪುರಿ ಜಗನ್ನಾಥ.. ಬಂಗಾಳ ಕೊಲ್ಲಿಯ ಕಡಲತಡಿಯಲ್ಲಿ ನೆಲೆನಿಂತ ಜಗದೋದ್ಧಾರಕ.. ಪವಿತ್ರ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮಹೋದಧಿಯ ನೆಲ. ಈ ಜಗದೊಡೆಯ ಜಗನ್ನಾಥ ಸಿರಿ ಸಂಪತ್ತಿನಿಂದ ಇಡೀ ಜಗತ್ತನ್ನೇ ಬೆರಗು ಮಾಡ್ತಿದ್ದಾನೆ.. ಸದ್ಯ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಬಯಲಾಗುವ ಸಮಯ ಬಂದಿದೆ.. ಕೋಟ್ಯಂತರ ಭಕ್ತರನ್ನು ಹೊಂದಿರುವ ದೇವಾಲಯ ಇವತ್ತು ಮಹಾ ಪವಾಡಕ್ಕೆ ಸಾಕ್ಷಿಯಾಗ್ತಿದೆ. ಅರ್ಥಾರ್ಥ್ ಬರೋಬ್ಬರಿ 46 ವರ್ಷಗಳ ನಂತರ ದೇವಾಲಯದ ಆಡಳಿತ ಸಮಿತಿ ರತ್ನ ಖಚಿತ ಭಂಡಾರದ ಕೋಣೆಯ ಬಾಗಿಲುಗಳನ್ನು ತೆಗೆಯಲು ಮುಂದಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ!
ಅಂದ್ಹಾಗೆ ಪುರಿ ಜಗನ್ನಾಥ ದೇವಾಲಯ ಅಚ್ಚರಿಗಳ ಆಗರ, ವಿಜ್ಞಾನಕ್ಕೆ ಸೆಡ್ಡು ಹೊಡೆಯೋ ವಿಸ್ಮಯಗಳ ತಾಣ. ಪುರಿ ಜಗನ್ನಾಥ್ ದೇವಸ್ಥಾನ ದೇಶದ ಪ್ರಮುಖ ಚಾರ್ ಧಾಮ್ಗಳಲ್ಲಿ ಒಂದು. ದೇವಾಲಯದ ವಿಶೇಷತೆಗಳು ಏನು ಅನ್ನೋದ್ರ ವಿವರ ಇಲ್ಲಿದೆ.
ಇದನ್ನೂ ಓದಿ:ಹೆಚ್ಚಿದ ಗೌರವ.. ಸ್ಥಳೀಯ ಆರ್ಥಿಕತೆಗೆ ಬಲ.. ಮುಖೇಶ್ ಅಂಬಾನಿ ಪುತ್ರನ ಮದ್ವೆಯಿಂದ ಯಾರಿಗೆ, ಹೇಗೆ ಲಾಭ..?
ದೇವಾಲಯದ ಮೇಲಿರುವ ಧ್ವಜ
ಈ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿಗೆ ಸಾಕ್ಷಿಯಾಗಿದೆ.
ದೇವಾಲಯ ಮೇಲಿನ ಸುದರ್ಶನ ಚಕ್ರ
ದೇವಸ್ಥಾನದ ಮೇಲಿರುವ ಸುದರ್ಶನ ಚಕ್ರವು 20 ಅಡಿ ಎತ್ತರ ಮತ್ತು ಒಂದು ಟನ್ ತೂಕ ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಏನೆಂದರೆ ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುತ್ತದೆ. ಜೊತೆಗೆ ಎಲ್ಲಿಯೇ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುತ್ತದೆ.
ಹಾರಾಡಲ್ಲ ಹಕ್ಕಿ, ಕೀಟ ಮತ್ತು ವಿಮಾನ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಇದು ಚಕ್ರಕ್ಕೆ ದೈವ ಶಕ್ತಿಯ ಪ್ರಭಾವ ಇದೆ ಎಂದು ನಂಬಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ.
ಇದನ್ನೂ ಓದಿ:ರಹಸ್ಯಗಳ ಹೊತ್ತು ನಿಂತ ಪೂರಿ ಜಗನ್ನಾಥ..! ಲೆಕ್ಕವೇ ಮಾಡಲಾಗದಷ್ಟು ರತ್ನ ಭಂಡಾರ ನೀಡಿದ್ದು ಯಾರು ಗೊತ್ತೇ..?
ದೇವಾಲಯದ ರಚನೆ ವಾಸ್ತುಶಿಲ್ಪ
ಪುರಿ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ದೇವಾಲಯದ ಒಳಗೆ ಮತ್ತು ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದು ಪ್ರಕೃತಿಯ ಪವಾಡ ಮತ್ತು ದೈವ ಶಕ್ತಿ ಎಂಬ ನಂಬಿಕೆ ಇದೆ.
1800 ವರ್ಷಗಳ ಹಳೆಯ ಆಚರಣೆ
ಈ ದೇವಾಲಯದಲ್ಲಿ ಪ್ರತಿದಿನ ಅರ್ಚಕರು ಸುಮಾರು 1000 ಅಡಿ ಎತ್ತರದಲ್ಲಿರುವ ಗೋಪುರಗಳನ್ನು ಹತ್ತಿ, ಬಾವುಟಗಳನ್ನು ಬದಲಿಸುತ್ತಾರೆ. ಈ ಆಚರಣೆಯು 1800 ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆ. ಈ ಆಚರಣೆಯು ಅನಿರೀಕ್ಷಿತವಾಗಿ ತಪ್ಪಿದರೆ ಮುಂದಿನ 18 ವರ್ಷಗಳ ಕಾಲ ದೇವಾಲಯ ಮುಚ್ಚಲ್ಪಡುತ್ತದೆ ಎಂಬ ನಂಬಿಕೆ ಇದೆ.
ಇದನ್ನೂ ಓದಿ:ಮದ್ವೆಗೆ ಬಂದಿದ್ದ ಸಿನಿಮಾ ಮಂದಿಗೆ ಅಂಬಾನಿ ಭರ್ಜರಿ ಗಿಫ್ಟ್.. 2 ಕೋಟಿ ಬೆಲೆಯ ವಾಚ್ ಯಾರಿಗೆಲ್ಲ ಕೊಟ್ಟಿದ್ದಾರೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಈ ಆಚರಣೆ ನಿಂತರೆ 18 ವರ್ಷ ದೇವಾಲಯ ಮುಚ್ಚುತ್ತದೆ
ದೇಗುಲದಲ್ಲಿರುವ ಸುದರ್ಶನ ಚಕ್ರದ ವಿಶೇಷ ಏನು ಗೊತ್ತಾ?
ವಿಜ್ಞಾನಕ್ಕೆ ಸೆಡ್ಡು ಹೊಡೆಯೋ ವಿಸ್ಮಯಗಳ ತಾಣ
ಪುರಿ ಜಗನ್ನಾಥ.. ಬಂಗಾಳ ಕೊಲ್ಲಿಯ ಕಡಲತಡಿಯಲ್ಲಿ ನೆಲೆನಿಂತ ಜಗದೋದ್ಧಾರಕ.. ಪವಿತ್ರ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮಹೋದಧಿಯ ನೆಲ. ಈ ಜಗದೊಡೆಯ ಜಗನ್ನಾಥ ಸಿರಿ ಸಂಪತ್ತಿನಿಂದ ಇಡೀ ಜಗತ್ತನ್ನೇ ಬೆರಗು ಮಾಡ್ತಿದ್ದಾನೆ.. ಸದ್ಯ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಬಯಲಾಗುವ ಸಮಯ ಬಂದಿದೆ.. ಕೋಟ್ಯಂತರ ಭಕ್ತರನ್ನು ಹೊಂದಿರುವ ದೇವಾಲಯ ಇವತ್ತು ಮಹಾ ಪವಾಡಕ್ಕೆ ಸಾಕ್ಷಿಯಾಗ್ತಿದೆ. ಅರ್ಥಾರ್ಥ್ ಬರೋಬ್ಬರಿ 46 ವರ್ಷಗಳ ನಂತರ ದೇವಾಲಯದ ಆಡಳಿತ ಸಮಿತಿ ರತ್ನ ಖಚಿತ ಭಂಡಾರದ ಕೋಣೆಯ ಬಾಗಿಲುಗಳನ್ನು ತೆಗೆಯಲು ಮುಂದಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ!
ಅಂದ್ಹಾಗೆ ಪುರಿ ಜಗನ್ನಾಥ ದೇವಾಲಯ ಅಚ್ಚರಿಗಳ ಆಗರ, ವಿಜ್ಞಾನಕ್ಕೆ ಸೆಡ್ಡು ಹೊಡೆಯೋ ವಿಸ್ಮಯಗಳ ತಾಣ. ಪುರಿ ಜಗನ್ನಾಥ್ ದೇವಸ್ಥಾನ ದೇಶದ ಪ್ರಮುಖ ಚಾರ್ ಧಾಮ್ಗಳಲ್ಲಿ ಒಂದು. ದೇವಾಲಯದ ವಿಶೇಷತೆಗಳು ಏನು ಅನ್ನೋದ್ರ ವಿವರ ಇಲ್ಲಿದೆ.
ಇದನ್ನೂ ಓದಿ:ಹೆಚ್ಚಿದ ಗೌರವ.. ಸ್ಥಳೀಯ ಆರ್ಥಿಕತೆಗೆ ಬಲ.. ಮುಖೇಶ್ ಅಂಬಾನಿ ಪುತ್ರನ ಮದ್ವೆಯಿಂದ ಯಾರಿಗೆ, ಹೇಗೆ ಲಾಭ..?
ದೇವಾಲಯದ ಮೇಲಿರುವ ಧ್ವಜ
ಈ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿಗೆ ಸಾಕ್ಷಿಯಾಗಿದೆ.
ದೇವಾಲಯ ಮೇಲಿನ ಸುದರ್ಶನ ಚಕ್ರ
ದೇವಸ್ಥಾನದ ಮೇಲಿರುವ ಸುದರ್ಶನ ಚಕ್ರವು 20 ಅಡಿ ಎತ್ತರ ಮತ್ತು ಒಂದು ಟನ್ ತೂಕ ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಏನೆಂದರೆ ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುತ್ತದೆ. ಜೊತೆಗೆ ಎಲ್ಲಿಯೇ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುತ್ತದೆ.
ಹಾರಾಡಲ್ಲ ಹಕ್ಕಿ, ಕೀಟ ಮತ್ತು ವಿಮಾನ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಇದು ಚಕ್ರಕ್ಕೆ ದೈವ ಶಕ್ತಿಯ ಪ್ರಭಾವ ಇದೆ ಎಂದು ನಂಬಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ.
ಇದನ್ನೂ ಓದಿ:ರಹಸ್ಯಗಳ ಹೊತ್ತು ನಿಂತ ಪೂರಿ ಜಗನ್ನಾಥ..! ಲೆಕ್ಕವೇ ಮಾಡಲಾಗದಷ್ಟು ರತ್ನ ಭಂಡಾರ ನೀಡಿದ್ದು ಯಾರು ಗೊತ್ತೇ..?
ದೇವಾಲಯದ ರಚನೆ ವಾಸ್ತುಶಿಲ್ಪ
ಪುರಿ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ದೇವಾಲಯದ ಒಳಗೆ ಮತ್ತು ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದು ಪ್ರಕೃತಿಯ ಪವಾಡ ಮತ್ತು ದೈವ ಶಕ್ತಿ ಎಂಬ ನಂಬಿಕೆ ಇದೆ.
1800 ವರ್ಷಗಳ ಹಳೆಯ ಆಚರಣೆ
ಈ ದೇವಾಲಯದಲ್ಲಿ ಪ್ರತಿದಿನ ಅರ್ಚಕರು ಸುಮಾರು 1000 ಅಡಿ ಎತ್ತರದಲ್ಲಿರುವ ಗೋಪುರಗಳನ್ನು ಹತ್ತಿ, ಬಾವುಟಗಳನ್ನು ಬದಲಿಸುತ್ತಾರೆ. ಈ ಆಚರಣೆಯು 1800 ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆ. ಈ ಆಚರಣೆಯು ಅನಿರೀಕ್ಷಿತವಾಗಿ ತಪ್ಪಿದರೆ ಮುಂದಿನ 18 ವರ್ಷಗಳ ಕಾಲ ದೇವಾಲಯ ಮುಚ್ಚಲ್ಪಡುತ್ತದೆ ಎಂಬ ನಂಬಿಕೆ ಇದೆ.
ಇದನ್ನೂ ಓದಿ:ಮದ್ವೆಗೆ ಬಂದಿದ್ದ ಸಿನಿಮಾ ಮಂದಿಗೆ ಅಂಬಾನಿ ಭರ್ಜರಿ ಗಿಫ್ಟ್.. 2 ಕೋಟಿ ಬೆಲೆಯ ವಾಚ್ ಯಾರಿಗೆಲ್ಲ ಕೊಟ್ಟಿದ್ದಾರೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ