/newsfirstlive-kannada/media/post_attachments/wp-content/uploads/2023/06/R-Ashwin.jpg)
ಚೆನ್ನೈ: ಇತ್ತೀಚೆಗೆ ಲಂಡನ್ನ ಓವಲ್ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ 209 ರನ್ಗಳ ಹೀನಾಯ ಸೋಲು ಅನುಭವಿಸುವ ಮೂಲಕ 2ನೇ ಬಾರಿಗೆ WTC ಟ್ರೋಫಿ ಗೆಲ್ಲುವಲ್ಲಿ ವಿಫಲವಾಯ್ತು.
ಇನ್ನು, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಗದ ಬಗ್ಗೆ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೌನಮುರಿದಿದ್ದಾರೆ. ನನಗೆ ಅವಕಾಶ ಸಿಗಲ್ಲ ಎಂದು 48 ಗಂಟೆಗಳ ಮೊದಲೇ ಗೊತ್ತಿತ್ತು ಎಂದಿದ್ದಾರೆ.
ಮೊದಲೇ ಗೊತ್ತಿತ್ತು ಎಂದ ಅಶ್ವಿನ್!
ನನಗೆ 36 ವರ್ಷ. ಈ ವಯಸ್ಸಿನಲ್ಲಿ ನಾನು ನನಗೆ ಸಂತೋಷ ನೀಡೋ ವಿಷಯಗಳ ಮೇಲೆ ಹೆಚ್ಚು ಗಮನ ಹರಿಸುವೆ. ನನಗೂ ಫೈನಲ್ ಪಂದ್ಯದಲ್ಲಿ ಆಡಬೇಕೆಂಬ ಆಸೆ ಇತ್ತು. ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಲು ನನ್ನ ಕೊಡುಗೆ ಕೂಡ ಇದೆ. ಕಳೆದ ಬಾರಿ ಆಡಿದ್ದ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲೂ ನಾನು 4 ವಿಕೆಟ್ ಪಡೆದಿದ್ದೆ ಎಂದರು.
ವಿದೇಶಿ ಪಿಚ್ಗಳಲ್ಲಿ ನನ್ನ ಬೌಲಿಂಗ್ ಚೆನ್ನಾಗಿದೆ. ಕೇವಲ ಬೌಲಿಂಗ್ ಮಾತ್ರವಲ್ಲ ಬ್ಯಾಟಿಂಗ್ ಕೂಡ ಉತ್ತಮವಾಗಿ ಮಾಡುತ್ತೇನೆ. ನನ್ನಿಂದಲೂ ಟೀಂ ಇಂಡಿಯಾ ಹಲವು ಪಂದ್ಯಗಳನ್ನು ಗೆದ್ದಿದೆ. ನನ್ನ ಹೊರಗೆ ಇಡುತ್ತಾರೆ ಎಂದರೆ ನಾನೇನು ಹೇಳಲು ಸಾಧ್ಯವಿಲ್ಲ ಎಂದರು. ಈ ಮೂಲಕ ಕೋಚ್ ದ್ರಾವಿಡ್, ಕ್ಯಾಪ್ಟನ್ ರೋಹಿತ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನದ ದಾಖಲೆ ಹೊಂದಿರೋ ಆರ್ ಅಶ್ವಿನ್ ಅವರನ್ನು ತಂಡದಿಂದ ಹೊರಗಿಟ್ಟಿದ್ದರ ವಿರುದ್ಧ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us