ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ರಚಿತಾ ರಾಮ್
ಇನ್ಸ್ಟಾಗ್ರಾಂನಲ್ಲಿ ಸಾಮಾನ್ಯ ಪ್ರಜೆಯಂತೆ ಪೋಸ್ಟ್ ಮಾಡಿದ ನಟಿ
ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ
ದರ್ಶನ್ ಮತ್ತು ಗ್ಯಾಂಗ್ ಹತ್ಯೆ ಪ್ರಕರಣದ ಕುರಿತು ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಡಲ್ಲಿ ಕಾನೂನಾತ್ಮಕವಾಗಿ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.
ಇನ್ಸ್ಟಾದಲ್ಲಿ ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಪೋಸ್ಟ್ ಹಂಚಿಕೊಂಡ ರಚಿತಾ ರಾಮ್. ‘ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ದರ್ಶನ್ ಗ್ಯಾಂಗ್ ಕುಡಿದಿದ್ದ ಬಿಲ್ 9 ಲಕ್ಷ ರೂಪಾಯಿ! ಎಣ್ಣೆ ಕಮ್ಮಿ ಆಯ್ತು ಅಂತ ಮತ್ತೆ ಗಲಾಟೆ ಮಾಡಿದ್ರಂತೆ!
ಜೊತೆಗೆ ನಟ ದರ್ಶನ್ ಬಗ್ಗೆ ‘ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದಲ್ಲಿ ತಪ್ಪುಗಳನ್ನ ತಿದ್ದಿ ಮಾರ್ಗದರ್ಶನ ನೀಡಿದವರು ದರ್ಶನ್ ಸರ್. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಬರಲಿದೆ’ ಎಂದು ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ರಚಿತಾ ರಾಮ್
ಇನ್ಸ್ಟಾಗ್ರಾಂನಲ್ಲಿ ಸಾಮಾನ್ಯ ಪ್ರಜೆಯಂತೆ ಪೋಸ್ಟ್ ಮಾಡಿದ ನಟಿ
ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ
ದರ್ಶನ್ ಮತ್ತು ಗ್ಯಾಂಗ್ ಹತ್ಯೆ ಪ್ರಕರಣದ ಕುರಿತು ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಡಲ್ಲಿ ಕಾನೂನಾತ್ಮಕವಾಗಿ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.
ಇನ್ಸ್ಟಾದಲ್ಲಿ ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಪೋಸ್ಟ್ ಹಂಚಿಕೊಂಡ ರಚಿತಾ ರಾಮ್. ‘ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ದರ್ಶನ್ ಗ್ಯಾಂಗ್ ಕುಡಿದಿದ್ದ ಬಿಲ್ 9 ಲಕ್ಷ ರೂಪಾಯಿ! ಎಣ್ಣೆ ಕಮ್ಮಿ ಆಯ್ತು ಅಂತ ಮತ್ತೆ ಗಲಾಟೆ ಮಾಡಿದ್ರಂತೆ!
ಜೊತೆಗೆ ನಟ ದರ್ಶನ್ ಬಗ್ಗೆ ‘ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದಲ್ಲಿ ತಪ್ಪುಗಳನ್ನ ತಿದ್ದಿ ಮಾರ್ಗದರ್ಶನ ನೀಡಿದವರು ದರ್ಶನ್ ಸರ್. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಬರಲಿದೆ’ ಎಂದು ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ