ಈ ಬಾರಿ ರಾಹುಲ್ ಗಾಂಧಿ ಎಲ್ಲಿಂದ ಜೋಡೋ ಯಾತ್ರೆ ಆರಂಭಿಸ್ತಾರೆ?
ಈಗಾಗಲೇ ಯಶಸ್ವಿಯಾಗಿದ್ದ ಭಾರತ್ ಜೋಡೋ ಯಾತ್ರೆಯ ಭಾಗ- 1
ಪ್ರಧಾನಿ ಮೋದಿಯನ್ನ ಕಟ್ಟಿ ಹಾಕಲು ಕಾಂಗ್ರೆಸ್ನಿಂದ ಬಲಿಷ್ಠ ಯಾಗ
ಪ್ರಧಾನಿ ಮೋದಿ ಎಂಬ ಅಶ್ವಮೇಧ ಕುದುರೆಗೆ ಲಗಾಮು ಹಾಕಲು ವಿಪಕ್ಷಗಳು ಕಾರ್ಯತಂತ್ರ ಹೆಣೆಯುತ್ತಿವೆ. ಇದಕ್ಕಾಗಿ ಈಗಾಗಲೇ ಒಂದು ಬಾರಿ ಭಾರತದ ಬೀದಿ ಬೀದಿಗಳಲ್ಲಿ ಸಂಚರಿಸಿ ಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೊಂದು ಯಾತ್ರೆ ಕೈಗೊಳ್ಳಲಿದ್ದಾರೆ. ಇಂದಿನಿಂದ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ.
ಭಾರತ್ ಜೋಡೋ ಯಾತ್ರೆ ಪ್ರಧಾನಿ ಮೋದಿ ನೇತೃತ್ವದ ಬಲಿಷ್ಠ ಕೇಂದ್ರ ಸರ್ಕಾರದ ವಿರುದ್ಧ ಹಸ್ತ ಪಡೆ ಕೈಗೊಂಡ ಯಾತ್ರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿತ್ತು. ಸದ್ಯ ಇದರ ಯಶಸ್ಸಿನ ಅಲೆಯಲ್ಲಿರುವ ಕೈ ಪಡೆ ಮತ್ತೊಂದು ಸುತ್ತಿನ 2.0 ಯಾತ್ರೆ ಕೈಗೊಂಡಿದೆ.
ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆಯಿಂದ ಯಾತ್ರೆಗೆ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಐಕ್ಯತಾ ನ್ಯಾಯ ಯಾತ್ರೆಯು ಇಂದು ಮಣಿಪುರದ ಥೌಬಾಲ್ ಜಿಲ್ಲೆಯ ಖಾಸಗಿ ಮೈದಾನದಿಂದ ಆರಂಭವಾಗಲಿದೆ. ಭದ್ರತೆ ಕಾರಣಕ್ಕೆ ಮಣಿಪುರ ರಾಜಧಾನಿ ಇಂಫಾಲದ ಅರಮನೆ ಮೈದಾನದಿಂದ ಯಾತ್ರೆ ಆರಂಭಿಸಲು ಅನುಮತಿ ನೀಡಲು ಮಣಿಪುರ ಸರ್ಕಾರ ನಿರಾಕರಿಸಿತ್ತು. ಆದ್ರೆ ಥೌಬಾಲ್ ಜಿಲ್ಲೆಯ ಖಾಸಗಿ ಮೈದಾನದಲ್ಲಿ ಯಾತ್ರೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಬಾರದೆಂದು ಷರತ್ತುಬದ್ಧ ಅನುಮತಿ ನೀಡಿದ್ರಿಂದ ಅಲ್ಲಿಂದ ಯಾತ್ರೆ ಆರಂಭವಾಗಲಿದೆ. ಯಾತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ.
ರಾಹುಲ್ ಗಾಂಧಿ ಯಾತ್ರೆ 2.0
ನ್ಯಾಯ್ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಣಿಪುರದಲ್ಲಿ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 9.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾತ್ರೆಯಲ್ಲಿ ಭಾಗಿಯಾದ ಬಳಿಕ ಸಂಜೆ ವೇಳೆಗೆ ವಾಪಸ್ ಆಗಲಿದ್ದಾರೆ.
ಕೇಂದ್ರದ ವಿರುದ್ಧ ಅದರಲ್ಲೂ ಮೋದಿ ಎಂಬ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ವಿಪಕ್ಷಗಳು ತಂತ್ರ ಹೆಣೆದಿವೆ. ಈಗಾಗಲೇ ಒಂದು ಭಾರತ ಜೋಡೋ ಯಾತ್ರೆ ಮಾಡಿ ಸೈ ಎನಿಸಿಕೊಂಡಿರುವ ರಾಹುಲ್ ಗಾಂಧಿ ಇಂದಿನಿಂದ ತಮ್ಮ ಯಾತ್ರೆ 2.0 ಆರಂಭಿಸಲಿದ್ದಾರೆ. ಮಣಿಪುರ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದರಿಂದ ಎಷ್ಟು ಜನ ಭಾಗಿಯಾಗ್ತಾರೆ ಅಂತ ಕಾದುನೋಡ್ಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಈ ಬಾರಿ ರಾಹುಲ್ ಗಾಂಧಿ ಎಲ್ಲಿಂದ ಜೋಡೋ ಯಾತ್ರೆ ಆರಂಭಿಸ್ತಾರೆ?
ಈಗಾಗಲೇ ಯಶಸ್ವಿಯಾಗಿದ್ದ ಭಾರತ್ ಜೋಡೋ ಯಾತ್ರೆಯ ಭಾಗ- 1
ಪ್ರಧಾನಿ ಮೋದಿಯನ್ನ ಕಟ್ಟಿ ಹಾಕಲು ಕಾಂಗ್ರೆಸ್ನಿಂದ ಬಲಿಷ್ಠ ಯಾಗ
ಪ್ರಧಾನಿ ಮೋದಿ ಎಂಬ ಅಶ್ವಮೇಧ ಕುದುರೆಗೆ ಲಗಾಮು ಹಾಕಲು ವಿಪಕ್ಷಗಳು ಕಾರ್ಯತಂತ್ರ ಹೆಣೆಯುತ್ತಿವೆ. ಇದಕ್ಕಾಗಿ ಈಗಾಗಲೇ ಒಂದು ಬಾರಿ ಭಾರತದ ಬೀದಿ ಬೀದಿಗಳಲ್ಲಿ ಸಂಚರಿಸಿ ಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಮತ್ತೊಂದು ಯಾತ್ರೆ ಕೈಗೊಳ್ಳಲಿದ್ದಾರೆ. ಇಂದಿನಿಂದ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ.
ಭಾರತ್ ಜೋಡೋ ಯಾತ್ರೆ ಪ್ರಧಾನಿ ಮೋದಿ ನೇತೃತ್ವದ ಬಲಿಷ್ಠ ಕೇಂದ್ರ ಸರ್ಕಾರದ ವಿರುದ್ಧ ಹಸ್ತ ಪಡೆ ಕೈಗೊಂಡ ಯಾತ್ರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿತ್ತು. ಸದ್ಯ ಇದರ ಯಶಸ್ಸಿನ ಅಲೆಯಲ್ಲಿರುವ ಕೈ ಪಡೆ ಮತ್ತೊಂದು ಸುತ್ತಿನ 2.0 ಯಾತ್ರೆ ಕೈಗೊಂಡಿದೆ.
ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆಯಿಂದ ಯಾತ್ರೆಗೆ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಐಕ್ಯತಾ ನ್ಯಾಯ ಯಾತ್ರೆಯು ಇಂದು ಮಣಿಪುರದ ಥೌಬಾಲ್ ಜಿಲ್ಲೆಯ ಖಾಸಗಿ ಮೈದಾನದಿಂದ ಆರಂಭವಾಗಲಿದೆ. ಭದ್ರತೆ ಕಾರಣಕ್ಕೆ ಮಣಿಪುರ ರಾಜಧಾನಿ ಇಂಫಾಲದ ಅರಮನೆ ಮೈದಾನದಿಂದ ಯಾತ್ರೆ ಆರಂಭಿಸಲು ಅನುಮತಿ ನೀಡಲು ಮಣಿಪುರ ಸರ್ಕಾರ ನಿರಾಕರಿಸಿತ್ತು. ಆದ್ರೆ ಥೌಬಾಲ್ ಜಿಲ್ಲೆಯ ಖಾಸಗಿ ಮೈದಾನದಲ್ಲಿ ಯಾತ್ರೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಬಾರದೆಂದು ಷರತ್ತುಬದ್ಧ ಅನುಮತಿ ನೀಡಿದ್ರಿಂದ ಅಲ್ಲಿಂದ ಯಾತ್ರೆ ಆರಂಭವಾಗಲಿದೆ. ಯಾತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ.
ರಾಹುಲ್ ಗಾಂಧಿ ಯಾತ್ರೆ 2.0
ನ್ಯಾಯ್ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಣಿಪುರದಲ್ಲಿ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 9.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾತ್ರೆಯಲ್ಲಿ ಭಾಗಿಯಾದ ಬಳಿಕ ಸಂಜೆ ವೇಳೆಗೆ ವಾಪಸ್ ಆಗಲಿದ್ದಾರೆ.
ಕೇಂದ್ರದ ವಿರುದ್ಧ ಅದರಲ್ಲೂ ಮೋದಿ ಎಂಬ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ವಿಪಕ್ಷಗಳು ತಂತ್ರ ಹೆಣೆದಿವೆ. ಈಗಾಗಲೇ ಒಂದು ಭಾರತ ಜೋಡೋ ಯಾತ್ರೆ ಮಾಡಿ ಸೈ ಎನಿಸಿಕೊಂಡಿರುವ ರಾಹುಲ್ ಗಾಂಧಿ ಇಂದಿನಿಂದ ತಮ್ಮ ಯಾತ್ರೆ 2.0 ಆರಂಭಿಸಲಿದ್ದಾರೆ. ಮಣಿಪುರ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದರಿಂದ ಎಷ್ಟು ಜನ ಭಾಗಿಯಾಗ್ತಾರೆ ಅಂತ ಕಾದುನೋಡ್ಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ