100 ದೇವಾಲಯಗಳಿಗೆ ತೆರಳಲು ಕಾಂಗ್ರೆಸ್ ಮಹಾ ಪ್ಲಾನ್
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕೇವಲ 5 ದಿನಗಳು ಬಾಕಿ
ಬಸ್ನಲ್ಲಿ ಪ್ರಯಾಣಿಸಲು ವಿಶೇಷ ಟಿಕೆಟ್ ಘೋಷಣೆ
ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗದಿರುವಂತೆ ಈಗಾಗಲೇ ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದ ಬಗ್ಗೆ ಚರ್ಚೆಗಳು ಮತ್ತು ರಾಜಕೀಯ ವಾಕ್ಸಮರ ನಡೀತಾ ಇರುವಂತಯೇ, ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿಲುವನ್ನ ಅವರು ಸಮರ್ಥಿಸಿಕೊಂಡಿದ್ದು ಇದು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ.
ಇದು ಆರ್ಎಸ್ಎಸ್, ಮೋದಿ ಪಂಕ್ಷನ್ ಎಂದು ವಾಗ್ದಾಳಿ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಕೇವಲ 5 ದಿನ ಬಾಕಿ ಉಳಿದಿದೆ. ಸಾವಿರಾರು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಆದ್ರೆ ಕಾಂಗ್ರೆಸ್ ಮಾತ್ರಾ ಇದು ಒಂದು ಪಕ್ಷದ ರಾಜಕೀಯ ಪ್ರೇರಿತ ಕಾರ್ಯಕ್ರಮ ಎಂದು ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ತಿರ್ಮಾನಿಸಿದೆ. ಇದೇ ವಿಚಾರವಾಗಿ ಮೊದಲ ಬಾರಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮ ಮೋದಿ ಕಾರ್ಯಕ್ರಮ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಈ ಮೂಲಕ ಕಾಂಗ್ರೆಸ್ ಪಕ್ಷ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದನ್ನು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ. ಸದ್ಯ ರಾಹುಲ್ ಗಾಂಧಿಯವರು ಭಾರತ್ ಜೋಡೋ ರೀತಿಯ 2ನೇ ಹಂತದ ಯಾತ್ರೆ , ಭಾರತ್ ನ್ಯಾಯ ಯಾತ್ರೆಯಲ್ಲಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿಯು ಜನವರಿ 22 ರಂದು ಕಾರ್ಯಕ್ರಮವನ್ನು ಸಂಪೂರ್ಣ ಮೋದಿ ರಾಜಕೀಯ ಕಾರ್ಯಕ್ರಮವಾಗಿ ಮಾಡಿದೆ. ಇದು ಆರ್ಎಸ್ಎಸ್- ಬಿಜೆಪಿ ಕಾರ್ಯಕ್ರಮ. ಬಹುಶಃ ಇದಕ್ಕೆ ಕಾಂಗ್ರೆಸ್ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ನಾವು ಎಲ್ಲ ಧರ್ಮೀಯರಿಗೆ, ಎಲ್ಲ ಆಚರಣೆಗಳಿಗೆ ಮುಕ್ತರಾಗಿದ್ದೇವೆ. ಹಿಂದೂ ಧರ್ಮದ ಹಿರಿಯ ಮುಖಂಡರೂ ಕೂಡಾ ಜನವರಿ 22ರ ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ರಾಜಕೀಯ ಕಾರ್ಯಕ್ರಮ ಅಲ್ಲವೇ?
-ರಾಹುಲ್ ಗಾಂಧಿ
ಯಾತ್ರೆಗಾಗಿ ‘ಮೊಹಬ್ಬತ್ ಕಿ ದುಕಾನ್’ ಬಸ್
ಮಣಿಪುರದಿಂದ ಆರಂಭವಾದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನ್ಯಾಗಲ್ಯಾಂಡ್ ತಲುಪಿದೆ. ಕಾಲ್ನಡಿಗೆ ಮತ್ತು ಬಸ್ ಮೂಲಕ ಯಾತ್ರೆ ಸಾಗುತ್ತಿದ್ದು, ಇದಕ್ಕಾಗಿ ವಿಶೇಷ ರೀತಿಯಲ್ಲಿ ಬಸ್ ವಿನ್ಯಾಗೊಳಿಸಲಾಗಿದ್ದು. ಈ ಬಸ್ನಲ್ಲಿ ಪ್ರಯಾಣಿಸಬೇಕು ಎಂದುಕೊಂಡವರಿಗೆ ರಾಹುಲ್ ಗಾಂಧಿ ಚಿತ್ರ ಮತ್ತು ಅವರ ಸಹಿ ಇರುವ ವಿಶೇಷ ಟಿಕೆಟ್ ಅನ್ನು ಕೊಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ನೂರಾರು ದೇವಾಲಯಗಳಿಗೆ ತೆರಳಲು ಕಾಂಗ್ರೆಸ್ ಪ್ಲಾನ್!
ಇನ್ನು, ಭಾರತ್ ಜೋಡೋ ನ್ಯಾಯ ಯಾತ್ರೆ ಪೂರ್ವದಿಂದ ಪಶ್ಚಿಮದ 15 ರಾಜ್ಯಗಳಲ್ಲಿ 110 ಜಿಲ್ಲೆಗಳಲ್ಲಿ ಸುಮಾರು 6, 713 ಕಿಲೋ ಮೀಟರ್ ಸಾಗಲಿದೆ. ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇದ್ರೂ ಯಾತ್ರೆಯ ಸಂದರ್ಭದಲ್ಲಿ ಪಕ್ಷದ ನಾಯಕರು ನೂರಾರು ದೇವಾಲಯಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭಕ್ಕೆ ಇಡೀ ವಿಶ್ವವೇ ಕಾದು ಕುಳಿತ್ತಿದೆ. ಇದೇ ವೇಳೆ ಕಾಂಗ್ರೆಸ್ ರಾಮಮಂದಿರ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿರುವುದು ರಾಮಭಕ್ತರು ಮತ್ತು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
100 ದೇವಾಲಯಗಳಿಗೆ ತೆರಳಲು ಕಾಂಗ್ರೆಸ್ ಮಹಾ ಪ್ಲಾನ್
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕೇವಲ 5 ದಿನಗಳು ಬಾಕಿ
ಬಸ್ನಲ್ಲಿ ಪ್ರಯಾಣಿಸಲು ವಿಶೇಷ ಟಿಕೆಟ್ ಘೋಷಣೆ
ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗದಿರುವಂತೆ ಈಗಾಗಲೇ ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದ ಬಗ್ಗೆ ಚರ್ಚೆಗಳು ಮತ್ತು ರಾಜಕೀಯ ವಾಕ್ಸಮರ ನಡೀತಾ ಇರುವಂತಯೇ, ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿಲುವನ್ನ ಅವರು ಸಮರ್ಥಿಸಿಕೊಂಡಿದ್ದು ಇದು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ.
ಇದು ಆರ್ಎಸ್ಎಸ್, ಮೋದಿ ಪಂಕ್ಷನ್ ಎಂದು ವಾಗ್ದಾಳಿ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಕೇವಲ 5 ದಿನ ಬಾಕಿ ಉಳಿದಿದೆ. ಸಾವಿರಾರು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಆದ್ರೆ ಕಾಂಗ್ರೆಸ್ ಮಾತ್ರಾ ಇದು ಒಂದು ಪಕ್ಷದ ರಾಜಕೀಯ ಪ್ರೇರಿತ ಕಾರ್ಯಕ್ರಮ ಎಂದು ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ತಿರ್ಮಾನಿಸಿದೆ. ಇದೇ ವಿಚಾರವಾಗಿ ಮೊದಲ ಬಾರಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮ ಮೋದಿ ಕಾರ್ಯಕ್ರಮ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಈ ಮೂಲಕ ಕಾಂಗ್ರೆಸ್ ಪಕ್ಷ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದನ್ನು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ. ಸದ್ಯ ರಾಹುಲ್ ಗಾಂಧಿಯವರು ಭಾರತ್ ಜೋಡೋ ರೀತಿಯ 2ನೇ ಹಂತದ ಯಾತ್ರೆ , ಭಾರತ್ ನ್ಯಾಯ ಯಾತ್ರೆಯಲ್ಲಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿಯು ಜನವರಿ 22 ರಂದು ಕಾರ್ಯಕ್ರಮವನ್ನು ಸಂಪೂರ್ಣ ಮೋದಿ ರಾಜಕೀಯ ಕಾರ್ಯಕ್ರಮವಾಗಿ ಮಾಡಿದೆ. ಇದು ಆರ್ಎಸ್ಎಸ್- ಬಿಜೆಪಿ ಕಾರ್ಯಕ್ರಮ. ಬಹುಶಃ ಇದಕ್ಕೆ ಕಾಂಗ್ರೆಸ್ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ನಾವು ಎಲ್ಲ ಧರ್ಮೀಯರಿಗೆ, ಎಲ್ಲ ಆಚರಣೆಗಳಿಗೆ ಮುಕ್ತರಾಗಿದ್ದೇವೆ. ಹಿಂದೂ ಧರ್ಮದ ಹಿರಿಯ ಮುಖಂಡರೂ ಕೂಡಾ ಜನವರಿ 22ರ ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ರಾಜಕೀಯ ಕಾರ್ಯಕ್ರಮ ಅಲ್ಲವೇ?
-ರಾಹುಲ್ ಗಾಂಧಿ
ಯಾತ್ರೆಗಾಗಿ ‘ಮೊಹಬ್ಬತ್ ಕಿ ದುಕಾನ್’ ಬಸ್
ಮಣಿಪುರದಿಂದ ಆರಂಭವಾದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನ್ಯಾಗಲ್ಯಾಂಡ್ ತಲುಪಿದೆ. ಕಾಲ್ನಡಿಗೆ ಮತ್ತು ಬಸ್ ಮೂಲಕ ಯಾತ್ರೆ ಸಾಗುತ್ತಿದ್ದು, ಇದಕ್ಕಾಗಿ ವಿಶೇಷ ರೀತಿಯಲ್ಲಿ ಬಸ್ ವಿನ್ಯಾಗೊಳಿಸಲಾಗಿದ್ದು. ಈ ಬಸ್ನಲ್ಲಿ ಪ್ರಯಾಣಿಸಬೇಕು ಎಂದುಕೊಂಡವರಿಗೆ ರಾಹುಲ್ ಗಾಂಧಿ ಚಿತ್ರ ಮತ್ತು ಅವರ ಸಹಿ ಇರುವ ವಿಶೇಷ ಟಿಕೆಟ್ ಅನ್ನು ಕೊಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ನೂರಾರು ದೇವಾಲಯಗಳಿಗೆ ತೆರಳಲು ಕಾಂಗ್ರೆಸ್ ಪ್ಲಾನ್!
ಇನ್ನು, ಭಾರತ್ ಜೋಡೋ ನ್ಯಾಯ ಯಾತ್ರೆ ಪೂರ್ವದಿಂದ ಪಶ್ಚಿಮದ 15 ರಾಜ್ಯಗಳಲ್ಲಿ 110 ಜಿಲ್ಲೆಗಳಲ್ಲಿ ಸುಮಾರು 6, 713 ಕಿಲೋ ಮೀಟರ್ ಸಾಗಲಿದೆ. ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇದ್ರೂ ಯಾತ್ರೆಯ ಸಂದರ್ಭದಲ್ಲಿ ಪಕ್ಷದ ನಾಯಕರು ನೂರಾರು ದೇವಾಲಯಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭಕ್ಕೆ ಇಡೀ ವಿಶ್ವವೇ ಕಾದು ಕುಳಿತ್ತಿದೆ. ಇದೇ ವೇಳೆ ಕಾಂಗ್ರೆಸ್ ರಾಮಮಂದಿರ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿರುವುದು ರಾಮಭಕ್ತರು ಮತ್ತು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ