ಪ್ರಯಾಣಿಕರೇ ಗಮನಿಸಿ.. ಜುಲೈ 1ರಿಂದ ತತ್ಕಾಲ್‌ ಟಿಕೆಟ್‌ ಬುಕಿಂಗ್​ನಲ್ಲಿ ಹೊಸ ನಿಯಮ ಜಾರಿ

author-image
Veena Gangani
Updated On
Coromandel Expressಗೆ ‘ಸರಣಿ ಕಂಟಕ’.. 14 ವರ್ಷದ ಹಿಂದೇ ಇದೇ ವಾರ ನಡೆದಿತ್ತು ಭೀಕರ ದುರಂತ..!
Advertisment
  • ತತ್ಕಾಲ್​ ಟಿಕೆಟ್​ ಬುಕಿಂಗ್​ನಲ್ಲಿ ಹೊಸ ಬದಲಾವಣೆ ಜಾರಿ
  • ಇನ್ಮುಂದೆ ಏಜೆಂಟ್​​ಗಳಿಗೆ ತತ್ಕಾಲ್​ ಬುಕಿಂಗ್​ ನಿರ್ಬಂಧ!
  • ​ತತ್ಕಾಲ್​ ಟಿಕೆಟ್​ ಬುಕಿಂಗ್​ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ

ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಜಾರಿ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಅಣ್ಣಾವ್ರ ಮನೆಯಲ್ಲಿ ಅಮೃತಾಧಾರೆ ಸೀರಿಯಲ್​ ನಟ ರಾಜೇಶ್​ ನಟರಂಗ್; ಏನಾದ್ರೂ ವಿಶೇಷ ಉಂಟಾ?

publive-image

ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್​ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಭಾರತೀಯ ರೈಲ್ವೆಯ ಅಧಿಕೃತ ವೆಬ್ ಸೈಟ್​​ ನಲ್ಲಿ ಟಿಕೆಟ್​ ಬುಕ್ಕಿಂಗ್ ಮಾಡುವವರು ಆಧಾರ್ ದೃಢೀಕರಣ ಮಾಡಿಕೊಳ್ಳಬೇಕು ಎಂದು ಸಚಿವಾಲು ಹೇಳಿದೆ. ಜುಲೈ 15ರಿಂದ ತತ್ಕಾಲ್​​ ನಲ್ಲಿ ಟಿಕೆಟ್​ ಬುಕ್ ಮಾಡಲು ಆಧಾರ್ ಕಾರ್ಡ್ OTP ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. OTP ದೃಢೀಕರಣದ ನಂತರವೇ ಪಿಆರ್ ಎಸ್ ಕೌಂಟರ್​ಗಳ ಮೂಲಕ ಬುಕ್ಕಿಂಗ್​ ಮಾಡಲು ತತ್ಕಾಲ್ ಟಿಕೆಟ್ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

publive-image

ಇನ್ಮುಂದೆ ಏಜೆಂಟ್​​ಗಳಿಗೆ ತತ್ಕಾಲ್​ ಬುಕಿಂಗ್​ ನಿರ್ಬಂಧ!

ಹೌದು, ತತ್ಕಾಲ್​ ಟಿಕೆಟ್​ ಸಾಮಾನ್ಯ ಜನರಿಗೆ ಸಿಗಲಿ ಎನ್ನುವ ಉದ್ದೇಶದಿಂದ ರೈಲ್ವೆ ಸಚಿವಾಲಯವು ಮಹತ್ತರ ಬದಲಾವಣೆಯೊಂದನ್ನು ತಂದಿದೆ. ಭಾರತೀಯ ರೈಲ್ವೆಯ ಅಧಿಕೃತ ಏಜೆಂಟ್​ಗಳಿಗೆ ತತ್ಕಾಲ್ ಟಿಕೆಟ್​ ಆರಂಭವಾಗುವ ಮೊದಲ 30 ನಿಮಿಷದಲ್ಲಿ ಬುಕಿಂಗ್​ ಮಾಡುವ ಅವಕಾಶವನ್ನು ನಿರ್ಬಂಧಿಸಿದೆ. ಅಂದರೆ ಬೆಳಗ್ಗೆ 10 ರಿಂದ 10.30ರವರೆಗೆ ಎಸಿ, ಬೆಳಗ್ಗೆ 11 ರಿಂದ 11.30ರವರೆಗೆ ಆರಂಭವಾಗುವ ನಾನ್ ಎಸಿ ಟಿಕೆಟ್​ಗಳನ್ನು ಬುಕ್​ ಮಾಡುವುದಕ್ಕೆ ಏಜೆಂಟ್​​ಗಳಿಗೆ ಅವಕಾಶ ನೀಡಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment