Rain alert: ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ

author-image
Ganesh
Updated On
4 ದಿನ ಮೊದಲೇ ಮಾನ್ಸೂನ್ ಎಂಟ್ರಿ.. ಯಾವಾಗಿಂದ ಮುಂಗಾರು ಮಳೆ ಆರಂಭ..? ಮಹತ್ವದ ಮಾಹಿತಿ..!
Advertisment
  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ
  • 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ
  • ನಿನ್ನೆ ಸುರಿದ ಮಳೆಗೆ ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ

ಬೆಂಗಳೂರು: ರಾಜ್ಯದ ಹಲವಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನ ಮೂಡಿಗೆರೆ ಚಿತ್ರದುರ್ಗದ ಹಿರಿಯೂರು, ಮಂಡ್ಯದ ಕೆ.ಆರ್ ಪೇಟೆ, ರಾಮನಗರ, ಮೈಸೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆಯಾಗಿದೆ.

ಇದನ್ನೂ ಓದಿ:KKR vs SRH ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಏನಾಗುತ್ತದೆ..? ಫೈನಲ್​​ಗೆ ಹೋಗೋದು ಯಾರು? ಕಂಪ್ಲೀಟ್ ಮಾಹಿತಿ

ಇಂದು ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಿಸಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರದಲ್ಲಿ ಮುಂದಿನ 24 ಗಂಟೆ ಯಲ್ಲೋ ಅರ್ಲಟ್ ಘೋಷಿಸಿದೆ.

ಇದನ್ನೂ ಓದಿ:ನಾಳೆ ಆರ್​ಸಿಬಿ ಪಂದ್ಯ.. ಇವತ್ತು ಫೈನಲ್​​ಗೆ ಹೋಗೋದು ಯಾರು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment