/newsfirstlive-kannada/media/post_attachments/wp-content/uploads/2024/07/CKM-RAIN-6.jpg)
Advertisment
- ರಾಜ್ಯದ ಹಲವು ಭಾಗದಲ್ಲಿ ಅಬ್ಬರಿಸಲಿರುವ ವರುಣ
- ಕರಾವಳಿ ಭಾಗದಲ್ಲಿ ಮುಂದುವರೆದ ವರುಣಾರ್ಭಟ
- ಇವತ್ತು ಬೆಂಗಳೂರಲ್ಲಿ ಮಳೆ ಬರುತ್ತಾ? ಮಾಹಿತಿ ಏನು?
ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ 4 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Advertisment
ಜುಲೈ 8 ರವರೆಗೆ ಆರೆಂಜ್ ಅಲರ್ಟ್, ಜುಲೈ 9 ರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಬೀಳುವ ಸೂಚನೆ ಇದೆ. ಇಂದು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಭಾಗಗಳಿಗೂ ಇವತ್ತು ಆರೆಂಜ್ ಅಲರ್ಟ್ ಇದೆ. ಮುಂದಿನ 3 ದಿನ ಆರೆಂಜ್ ಅಲರ್ಟ್, 2 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisment
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ