ಮಳೆಯ ಎಚ್ಚರಿಕೆ.. ರಾಜ್ಯದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಎಂದ ಹವಾಮಾನ ಇಲಾಖೆ..

author-image
Ganesh
Updated On
ಕೊಂಚ ರಿಲ್ಯಾಕ್ಸ್​ ಕೊಟ್ಟ ಮಳೆರಾಯ.. ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ..
Advertisment
  • ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ
  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಆಗ್ತಿದೆ..
  • ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ

ಬೆಂಗಳೂರು: ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆ ಅಲರ್ಟ್​ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​..

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಎಲ್ಲೆಲ್ಲೂ ಮಳೆ.. ರುದ್ರಪ್ರಯಾಗ, ಕೇದಾರನಾಥದಲ್ಲಿ ಅನಾಹುತ.. ಯಾವೆಲ್ಲ ರಾಜ್ಯದಲ್ಲಿ ಮಳೆ ಜೋರಾಗಿದೆ..?

ಯೆಲ್ಲೋ ಅಲರ್ಟ್​: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಗದಗ, ಯಾದಗಿರಿ, ಕಲಬುರಗಿ, ಚಾಮರಾಜನಗರ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಮಳೆ ಕೂಡ ಬೀಳುತ್ತಿದೆ. ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ.

ಇದನ್ನೂ ಓದಿ: ಮರ ಬಿದ್ದು ಬೈಕ್ ಸವಾರರಿಗೆ ಗಾಯ.. ರಾಜ್ಯದಲ್ಲಿ ಮಳೆ ಅಬ್ಬರ ಜೋರು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment