RCB ಅಭಿಮಾನಿಗಳಿಗೆ ಬಿಗ್ ಶಾಕ್.. ಸಿಎಸ್​ಕೆ ವಿರುದ್ಧ ಪಂದ್ಯ ನಡೆಯುವ ಮೊದಲೇ ವಿಘ್ನ.. ವಿಘ್ನ..!

author-image
Bheemappa
Updated On
RCB ಅಭಿಮಾನಿಗಳಿಗೆ ಬಿಗ್ ಶಾಕ್.. ಸಿಎಸ್​ಕೆ ವಿರುದ್ಧ ಪಂದ್ಯ ನಡೆಯುವ ಮೊದಲೇ ವಿಘ್ನ.. ವಿಘ್ನ..!
Advertisment
  • ಹೈವೋಲ್ಟೇಜ್​ ಪಂದ್ಯಕ್ಕಾಗಿ ಕಾದು ಕುಳಿತಿರುವ ಕ್ರಿಕೆಟ್ ಫ್ಯಾನ್ಸ್​
  • ಇಂದು ಚಿನ್ನಸ್ವಾಮಿಯಲ್ಲಿ ನಡೆಯುವ ಪಂದ್ಯ 2 ತಂಡಕ್ಕೂ ಮುಖ್ಯ
  • ಇಂದು ಬೆಂಗಳೂರಿನ ತಾಪಮಾನ 22-30 ಡಿಗ್ರಿ ಸೆಲ್ಸಿಯಸ್ ಇದೆ

ಇಂದು ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ರಣರೋಚಕ ಪಂದ್ಯ ನಡೆಯಲಿದೆ. ಈಗಾಗಲೇ ಎರಡು ಕಡೆಯ ಆಟಗಾರರು ಚಿನ್ನಸ್ವಾಮಿಯಲ್ಲಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಎಂದಿನಂತೆ ಮ್ಯಾಚ್ ಕೂಡ ಸಂಜೆ 7:30ಕ್ಕೆ ಆರಂಭವಾಗಲಿದೆ. ಆದ್ರೆ ಪ್ಲೇ ಆಫ್​ನ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತದೆ ಎಂದು ಹೇಳಲಾಗುತ್ತಿದೆ.

ಚೆನ್ನೈ ಹಾಗೂ ಬೆಂಗಳೂರಿನ ರಣರಂಗಕ್ಕೆ ಫ್ಯಾನ್ಸ್​ ಅಂತೂ ಕಾತುರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳಿಗೆ ಆರ್​ಸಿಬಿ ತಂಡ ಪ್ಲೇ ಆಫ್​​ ಹಾದಿ ಹಿಡಿಯಲಿ ಎಂಬುದು ಆಸೆ ಇದೆ. ಆದರೆ ತಾಪಮಾನವು 22-30 ಡಿಗ್ರಿ ಸೆಲ್ಸಿಯಸ್ ಇರುವುದರಿಂದ ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಶೇ. 87 ರಷ್ಟು ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ.

ಇದನ್ನೂ ಓದಿ:RCB vs CSK ಫ್ಯಾನ್ಸ್​ಗೆ ಭಾರೀ ನಿರಾಸೆ.. ಶಾಕಿಂಗ್ ನ್ಯೂಸ್ ಕೊಟ್ಟ ಭಾರತದ ಹವಾಮಾನ ಇಲಾಖೆ

publive-image

ಧಾರಾಕಾರವಾಗಿ ಮಳೆ ಸುರಿಯುವುದರಿಂದ ಪ್ಲೇ ಆಫ್ ಪಂದ್ಯ ನಡೆಯುತ್ತದೆಯೋ, ಇಲ್ವೋ ಎಂಬುದು ಎಲ್ಲರಲ್ಲೂ ಅನುಮಾನ ಮೂಡಿದೆ. ಇದು ಅಲ್ಲದೇ ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಜೆ ಸಮಯದಲ್ಲಿ ಗುಡುಗು ಸಹಿತ ಮಳೆಯ ನಂತರ ಮತ್ತೆ ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಆರ್​ಸಿಬಿ ಹಾಗೂ ಚೆನ್ನೈ ಮ್ಯಾಚ್ ನಡೆಯುವ ಸಮಯದಲ್ಲಿ ಮಳೆ ಸುರಿಯುವುದರಿಂದ ಕ್ರಿಕೆಟ್​ ಫ್ಯಾನ್ಸ್​ಗೆ ದೊಡ್ಡ ನಿರಾಸೆಯಾಗುತ್ತದೆ ಎಂದು ಹೇಳಲಾಗ್ತಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment