ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆಗಲು ಪ್ರಯತ್ನ
ರಾಜಭವನದ ಮುಖ್ಯಗೇಟ್ಗೆ ಪೆಟ್ರೋಲ್ ಬಾಂಬ್ ಎಸೆದ
ಸಾಮಾನ್ಯ ವ್ಯಕ್ತಿ ರಾಜಭವನವನ್ನೇ ಟಾರ್ಗಟ್ ಮಾಡಿದ್ದೇಕೆ.?
ಚೆನ್ನೈ: ತಮಿಳುನಾಡಿನ ರಾಜಭವನದ ಮುಖ್ಯ ಗೇಟ್ ಬಳಿ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆಗುತ್ತಿದ್ದಾಗ ಪೊಲೀಸರು ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ.
K ವಿನೋದ್ ಪೆಟ್ರೋಲ್ ಬಾಂಬ್ ಎಸೆದ ಆರೋಪಿ. ಈತನು ಸೈದಾಪೇಟೆ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ಬೈಕ್ಗಳಲ್ಲಿ ಪೆಟ್ರೋಲ್ ಕದ್ದು ಬಳಿಕ ರಾಜಭವನದತ್ತ ನಡೆದುಕೊಂಡು ಬಂದಿದ್ದಾನೆ. ಬಳಿಕ ಎರಡು ಬಾಟಲಿಗಳಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿದ್ದಾನೆ. ಅವುಗಳನ್ನು ರಾಜಭವನದ ಮುಖ್ಯಗೇಟ್ಗೆ ಎಸೆದು ಪರಾರಿಯಾಗಲು ಪ್ರಯತ್ನಿಸುತ್ತಿದ್ದನು. ಈ ವೇಳೆ ಪೊಲೀಸರು ಓಡಿ ಹೋಗಿ ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ ಎಂದು ಹೇಳಲಾಗಿದೆ.
Petrol bombs were hurled at Raj Bhavan today, reflects the true law and order situation in Tamil Nadu. While DMK is busy diverting the attention of people to insignificant matters of interest, criminals have taken the streets.
Incidentally, it is the same person who attacked…
— K.Annamalai (@annamalai_k) October 25, 2023
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸರ್ಕಾರವನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ತರಾಟೆಗೆ ತೆಗೆದುಕೊಂಡಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅಣ್ಣಾಮಲೈ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಜನರನ್ನು ಸರ್ಕಾರ ಪ್ರಚೋದಿಸುವಂತೆ ಮಾಡುತ್ತಿದೆ. ಇದೊಂದು ಪ್ರಾಯೋಜಿತವಾಗಿ ನಡೆದಂತ ಘಟನೆ ಎಂದು ಟೀಕಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆಗಲು ಪ್ರಯತ್ನ
ರಾಜಭವನದ ಮುಖ್ಯಗೇಟ್ಗೆ ಪೆಟ್ರೋಲ್ ಬಾಂಬ್ ಎಸೆದ
ಸಾಮಾನ್ಯ ವ್ಯಕ್ತಿ ರಾಜಭವನವನ್ನೇ ಟಾರ್ಗಟ್ ಮಾಡಿದ್ದೇಕೆ.?
ಚೆನ್ನೈ: ತಮಿಳುನಾಡಿನ ರಾಜಭವನದ ಮುಖ್ಯ ಗೇಟ್ ಬಳಿ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆಗುತ್ತಿದ್ದಾಗ ಪೊಲೀಸರು ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ.
K ವಿನೋದ್ ಪೆಟ್ರೋಲ್ ಬಾಂಬ್ ಎಸೆದ ಆರೋಪಿ. ಈತನು ಸೈದಾಪೇಟೆ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ಬೈಕ್ಗಳಲ್ಲಿ ಪೆಟ್ರೋಲ್ ಕದ್ದು ಬಳಿಕ ರಾಜಭವನದತ್ತ ನಡೆದುಕೊಂಡು ಬಂದಿದ್ದಾನೆ. ಬಳಿಕ ಎರಡು ಬಾಟಲಿಗಳಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿದ್ದಾನೆ. ಅವುಗಳನ್ನು ರಾಜಭವನದ ಮುಖ್ಯಗೇಟ್ಗೆ ಎಸೆದು ಪರಾರಿಯಾಗಲು ಪ್ರಯತ್ನಿಸುತ್ತಿದ್ದನು. ಈ ವೇಳೆ ಪೊಲೀಸರು ಓಡಿ ಹೋಗಿ ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ ಎಂದು ಹೇಳಲಾಗಿದೆ.
Petrol bombs were hurled at Raj Bhavan today, reflects the true law and order situation in Tamil Nadu. While DMK is busy diverting the attention of people to insignificant matters of interest, criminals have taken the streets.
Incidentally, it is the same person who attacked…
— K.Annamalai (@annamalai_k) October 25, 2023
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸರ್ಕಾರವನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ತರಾಟೆಗೆ ತೆಗೆದುಕೊಂಡಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅಣ್ಣಾಮಲೈ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಜನರನ್ನು ಸರ್ಕಾರ ಪ್ರಚೋದಿಸುವಂತೆ ಮಾಡುತ್ತಿದೆ. ಇದೊಂದು ಪ್ರಾಯೋಜಿತವಾಗಿ ನಡೆದಂತ ಘಟನೆ ಎಂದು ಟೀಕಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ